Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆಯ ಲಾಕರ್‌ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳವು..!
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆಯ ಲಾಕರ್‌ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳವು..!

    April 2, 2025
    Share

    ಮಂಗಳೂರು: ಮನೆಯ ಲಾಕರ್‌ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ.ಪೆರ್ಮುದೆಯ ಜಾನ್ವಿನ್‌ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ.

    ಜಾನ್ವಿನ್‌ ಪಿಂಟೊ ಮತ್ತು ಅವರ ಪುತ್ರ ಪ್ರವೀಣ್‌ ಪಿಂಟೊ ಕುವೈಟ್‌ನಲ್ಲಿದ್ದಾರೆ. ಮನೆಗೆ ಬೀಗ ಹಾಕಿದ್ದು, ಮನೆಯ ಸುತ್ತ 16 ಸಿಸಿ ಕ್ಯಾಮರಾ ಅಳವಡಿಸಿದ್ದಾರೆ. ಆದರೆ ಕಳ್ಳರು ಸಿಸಿ ಕ್ಯಾಮರಾ ಇಲ್ಲದ ಕಡೆಯಿಂದ ಮನೆಗೆ ನುಗ್ಗಿ ಲಾಕರ್‌ನಲ್ಲಿದ್ದ ಅಪಾರ ಚಿನ್ನ ಕಳ್ಳತನ ಮಾಡಿದ್ದಾರೆ.ಕಿಟಿಕಿಯ ಕಬ್ಬಿಣದ ಗ್ರಿಲ್ಸ್‌ ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯಲ್ಲಿ ಮುಧೋಳ, ಜರ್ಮನ್‌ ಶೆಫರ್ಡ್‌ ಸೇರಿ 8 ನಾಯಿಗಳಿವೆ. ಚಾಣಾಕ್ಷ ಕಳ್ಳರು ಇವುಗಳ ಕಣ್ಣುತಪ್ಪಿಸಿ ಕಳ್ಳತನ ಮಾಡಿರುವುದು ಆಶ್ಚರ್ಯ ಉಂಟುಮಾಡಿದೆ. ಈ ನಾಯಿಗಳಿಗೆ ಆಹಾರ ಹಾಕಲು ಇಬ್ಬರು ಕೆಲದಾಳುಗಳು ಬರುತ್ತಿದ್ದು, ಮಂಗಳವಾರ ಬೆಳಗ್ಗೆ ಅವರು ಬಂದಾಗ ಕಳ್ಳತನವಾಗಿರುವುದು ತಿಳಿದುಬಂದಿದೆ.

    ಲಾಕರನ್ನು ಕೀ ಬಳಸಿ ತೆರೆದು ಅದರೊಳಗಿದ್ದ 1 ಕೆಜಿಯಷ್ಟು ಚಿನ್ನಾಭರಣಗಳು ಮತ್ತು ದುಬಾರಿ ಬೆಲೆಯ ಹಲವು ಕೈಗಡಿಯಾರಗಳನ್ನು ಕಳ್ಳತನ ಮಾಡಲಾಗಿದೆ. ಕೆಲಸದಾಳುಗಳು ಕೂಡಲೇ ಕುವೈಟ್‌ನಲ್ಲಿರುವ ಜಾನ್ವಿನ್‌ ಪಿಂಟೊ ಅವರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳು ಬಂದು ತನಿಖೆ ನಡೆಸಿದ್ದಾರೆ. ಕಳ್ಳತನವಾದ ಸೊತ್ತುಗಳ ನಿಖರ ಮೌಲ್ಯ ಜಾನ್ವಿನ್‌ ಪಿಂಟೊ ಕುವೈಟ್‌ನಿಂದ ಬಂದ ಬಳಿಕವಷ್ಟೇ ಗೊತ್ತಾಗಲಿದೆ.

    Post Views: 174

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.