Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ರಿಡ್ಜ್‌ನಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ರಿಡ್ಜ್‌ನಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

    August 5, 2025
    Share

    ಪಾವಂಜೆ ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪಿ.ವಿ.ಎಸ್ ಕಲಾಕುಂಜದ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿ (75) ಎಂದು ಗುರುತಿಸಲಾಗಿದೆ.

    ಆ.4ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಬರ್ಕೆ ಪೊಲೀಸ್ ಠಾಣೆ ಸರಹದ್ದಿಗೆ ಒಳಪಟ್ಟು ಪಿ.ವಿ.ಎಸ್ ಕಲಾಕುಂಜದ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿ (75) ಮಣ್ಣಗುಡ್ಡ ರವರು ಬೆಳಿಗ್ಗೆ ಕುದ್ರೋಳಿ ದೇವಸ್ಥಾನಕ್ಕೆಂದು ಹೋದವರು ಮರಳಿ ಮನೆಗೆ ಬಂದಿಲ್ಲವೆಂಬುದಾಗಿ ನಿತಿನ್ ಎಂಬವರು ಬರ್ಕೆ ಪೊಲೀಸ್ ಠಾಣೆಗೆ ತಿಳಿಸಿರುತ್ತಾರೆ. ಆ ಕೂಡಲೇ ಈ ಮಾಹಿತಿಯನ್ನು ಬರ್ಕೆ ಪೊಲೀಸ್ ಠಾಣೆಯ ಎ.ಎಸ್.ಐ ಸುಧಾಕರ್ ರವರು ERSS-112 ಗೆ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ.

    ಈ ಸಮಯದಲ್ಲಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ERSS-112 ಕರ್ತವ್ಯದಲ್ಲಿದ್ದ ಪೊಲೀಸರಾದ ಹೆಡ್ ಕಾನ್ಸ್ಟೇಬಲ್‌‌ಗಳಾದ ಯೊಗೀಶ್, ಕಿಶೋರ್ ಕುಮಾರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಧುಕರ್ ರವರು ಮಾಹಿತಿಯನ್ನು ಸ್ವೀಕರಿಸಿ ಶೀಘ್ರ ಕಾರ್ಯಚಕಿತರಾಗಿ ಮಾಹಿತಿಯ ಮೇರೆಗೆ ಪಾವಂಜೆ ಬ್ರಿಡ್ಜ್ ಬಳಿ ತೆರಳಿದಾಗ ಪಾವಂಜೆ ಬ್ರಿಡ್ಜ್‌ನ ದಂಡೆಯ ಮೇಲಿನಿಂದ ನದಿಗೆ ಹಾರಲು ಪ್ರಯತ್ನಿಸುತ್ತಿದ್ದ ವಿಶ್ವನಾಥ ಶೆಟ್ಟಿರವರನ್ನು ಸಾರ್ವಜನಿಕರ ಸಹಾಯದೊಂದಿಗೆ ಸಕಲಾದಲ್ಲಿ ತಡೆದು ಅವರ ಜೀವರಕ್ಷಣೆಯನ್ನು ಮಾಡಿರುತ್ತಾರೆ.

    ಈ ಸಮಯದಲ್ಲಿ ವಿಶ್ವನಾಥ ಶೆಟ್ಟಿಯವರು ಚರ್ಮದ ಖಾಯಿಲೆಯಿಂದ ಬಳಲುತ್ತಿರುವ ವಿಚಾರದಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿರುವ ವಿಷಯ ಬೆಳಕಿಗೆ ಬಂದಿರುತ್ತದೆ. ಬಳಿಕ ವಿಶ್ವನಾಥ ಶೆಟ್ಟಿಯವರನ್ನು ಸಹೋದರಿ ವಾಣಿ ಶೆಟ್ಟಿ ಹಾಗೂ ಮಾಜಿ ಕಾರ್ಪೊರೇಟರ್ ಪ್ರಕಾಶ್ ರವರ ಜೊತೆಗೆ ಕಳುಹಿಸಿಕೊಡಲಾಗಿರುತ್ತದೆ.

    Post Views: 162

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.