ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆಯ ರಜೆ ಸರಿದೂಗಿಸಲು ಸೆಪ್ಟೆಂಬರ್ ಮೊದಲ ವಾರದಿಂದ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ಶಾಲೆ ನಡೆಸುವಂತೆ ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ. ಜುಲೈ ತಿಂಗಳಿನಲ್ಲಿ ಅತ್ಯಧಿಕ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ 7 ದಿವಸಗಳ ರಜೆ ನೀಡಲಾಗಿತ್ತು. ಈ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ತರಗತಿಯ ನಷ್ಟವನ್ನು ಭರ್ತಿ ಮಾಡಲು ಸಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 11 ಶನಿವಾರಗಳಂದು ಇಡೀ ದಿನ ಶಾಲೆಗಳನ್ನು ನಡೆಸುವಂತೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಉಪನಿರ್ದೇಶಕರು ಸೂಚಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)