Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತ ಮಗಳಿಗೆ ಆಕ್ಟಿವ್ ಹೊಂಡಾ ಕೊಟ್ಟು 25 ಸಾವಿರ ರೂ. ದಂಡ ಕಟ್ಟಿದ ತಾಯಿ
    ಇತ್ತೀಚಿನ ಸುದ್ದಿ

    ಅಪ್ರಾಪ್ತ ಮಗಳಿಗೆ ಆಕ್ಟಿವ್ ಹೊಂಡಾ ಕೊಟ್ಟು 25 ಸಾವಿರ ರೂ. ದಂಡ ಕಟ್ಟಿದ ತಾಯಿ

    February 19, 2025
    Share

    ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡುವ ಪೋಷಕರ ವಿರುದ್ಧ ಟ್ರಾಫಿಕ್ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾಗಳಾಗುವ ಸಾಧ್ಯತೆಯನ್ನು ತಡೆಯುವುದಕ್ಕಾಗಿ ಸಾರಿಗೆ ಇಲಾಖೆಯೂ ಕಠಿಣ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ, ಅಂಥ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಇದೀಗ ದಾವಣಗೆರೆಯಲ್ಲಿ, ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.

    ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಆಕ್ಟಿವ್ ಹೊಂಡಾ ಚಲಾಯಿಸುತ್ತಿದ್ದಳು. ಅದನ್ನು ತಡೆದ ಟ್ರಾಫಿಕ್ ಪೊಲೀಸರು ದಾಖಲೆ ಪರಿಶೀಲನೆ ಮಾಡಿದ್ದಾರೆ. ಇದೇ ವೇಳೆ, ಅದನ್ನು ಚಲಾಯಿಸುತ್ತಿರುವುದು ಅಪ್ರಾಪ್ತ ಬಾಲಕಿ ಎಂಬುದು ದೃಢವಾಗೊದೆ. ನಂತರ ಪೊಲೀಸರು ಆಕೆಯ ತಾಯಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಸಂಚಾರ ನಿಯಮಗಳಲ್ಲಿ ಏನಿದೆ?

    ಕರ್ನಾಟಕದಲ್ಲಿ, ಸಣ್ಣ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡುವುದು ಅಪರಾಧವಾಗಿದೆ. ಅಂಥ ಪೋಷಕರು ಅಥವಾ ಪಾಲಕರಿಗೆ ಕಠಿಣ ದಂಡವನ್ನು ವಿಧಿಸಲು ಅವಕಾಶವಿದೆ. ‘ಮೋಟಾರು ವಾಹನಗಳ ಕಾಯ್ದೆ, 1988’ ರ ಅಡಿಯಲ್ಲಿ, ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿದರೆ, ವಾಹನದ ಮಾಲೀಕರಿಗೆ (ಸಾಮಾನ್ಯವಾಗಿ ಪೋಷಕರು) ಮೂರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 25,000 ರೂ. ಮೇಲ್ಪಟ್ಟು ದಂಡ, ಅಥವಾ ಎರಡೂ ಶಿಕ್ಷೆಯನ್ನು ವಿಧಿಸಬಹುದಾಗಿದೆ. ವಾಹನದ ನೋಂದಣಿಯನ್ನು 12 ತಿಂಗಳ ಅವಧಿಗೆ ಅಮಾನತಿನಲ್ಲಿ ಇಡುವುದಕ್ಕೂ ಅವಕಾಶವಿದೆ.

    ಕರ್ನಾಟಕದ ಹಲವೆಡೆ ಅಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ಮಾಡಿಕೊಟ್ಟವರಿಗೆ ದಂಡ ವಿಧಿಸಿದ ಉದಾಹರಣೆಗಳಿವೆ. 17 ವರ್ಷದ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ತಾಯಿಗೆ 30,000 ರೂ. ದಂಡ ವಿಧಿಸಿದ ಘಟನೆ ಇತ್ತೀಚೆಗೆ ಶಿವಮೊಗಾದಲ್ಲಿ ವರದಿಯಾಗಿತ್ತು. ಬೆಂಗಳೂರು ಟ್ರಾಫಿಕ್ ಪೊಲೀಸರು ಸಹ ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ಅವಕಾಶ ನೀಡಿದ ಪೋಷಕರಿಗೆ ತಲಾ 25,000 ದಂಡ ವಿಧಿಸಿದ್ದಾರೆ.

    Post Views: 286

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.