Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಬಾಲಕ ಸಾವು
    ಇತ್ತೀಚಿನ ಸುದ್ದಿ

    ಉಡುಪಿ : ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

    May 12, 2025
    Share

    ಉಡುಪಿ : ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ.
    ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ.

    ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಸೌಮ್ಯ ಅವರು ತಮ್ಮ ಕಿರಿಯ ಮಗುವಿಗೆ ಸಭಾಂಗಣದ ಒಳಗೆ ಊಟ ಮಾಡಿಸುತ್ತಿದ್ದರು. ವಾಸುದೇವ ಕೂಡ ತಾಯಿಯ ಸಮೀಪವಿದ್ದನು.

    ಮಗುವಿಗೆ ಊಟ ಮಾಡಿಸಿದ ನಂತರ, ಸೌಮ್ಯ ಅವರು ಕೈ ತೊಳೆಯಲು ಹೊರಗೆ ಹೋದರು ಎನ್ನಲಾಗಿದೆ. ಹಿಂತಿರುಗಿದಾಗ, ವಾಸುದೇವ ಕಾಣೆಯಾಗಿರುವುದು ಅವರ ಗಮನಕ್ಕೆ ಬಂದಿತು. ತಕ್ಷಣ ಅವರು ಸಭಾಂಗಣದಲ್ಲಿದ್ದ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ತಿಳಿಸಿ ಆವರಣದಲ್ಲಿ ಹುಡುಕಾಟ ನಡೆಸಿದ್ದಾರೆ. ಎಷ್ಟು ಹುಡುಕಿದರೂ, ಮಗು ಸಭಾಂಗಣದ ಒಳಗೆ ಪತ್ತೆಯಾಗಲಿಲ್ಲ. ಸುಮಾರು 2:15 ರ ಸುಮಾರಿಗೆ, ವಾಸುದೇವನ ದೇಹವು ಸಮಾರಂಭದ ಸ್ಥಳದ ಪಕ್ಕದಲ್ಲಿದ್ದ ದೇವಾಲಯದ ಕೆರೆಯಲ್ಲಿ ತೇಲುತ್ತಿರುವುದು ಕಂಡುಬAದಿತು. ಅಲ್ಲಿದ್ದವರು ತಕ್ಷಣ ಮಗುವನ್ನು ಹೊರತೆಗೆದು ಪ್ರಥಮ  ಚಿಕಿತ್ಸೆ ನೀಡಲು ಪ್ರಯತ್ನಿಸಿದರು. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸಿರಲಿಲ್ಲಲ್ಲೀ ವಿಷಯವನ್ನು ಸೌಮ್ಯ ಅವರು ತಮ್ಮ ಪತಿಗೆ ತಿಳಿಸಿದ್ದು, ಮಗುವನ್ನು ತಕ್ಷಣ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಬಳಿಕ ಕುಟುಂಬವು ಮಗುವನ್ನು ಮಣಿಪಾಲದ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದಿತ್ತು. ಆದರೆ ಅಲ್ಲಿಯೂ ವೈದ್ಯರು ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 187

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.