Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾರಿನಲ್ಲಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು- ಆರೋಪಿ ಅರೆಸ್ಟ್‌..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಾರಿನಲ್ಲಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು- ಆರೋಪಿ ಅರೆಸ್ಟ್‌..!

    December 11, 2024
    Share

    ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ.

    ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ. ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಕಲಂ 303(2) ಬಿಎನ್ ಎಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು 24 ಗಂಟೆಯೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ. ಆರೋಪಿಯಿಂದ ಕಳವು ಮಾಡಿದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಆಕ್ಸೆಸ್ ಸ್ಕೂಟರ್ ಸೇರಿದಂತೆ ಒಟ್ಟು 7,30,000ರೂ. ಮೌಲ್ಯದ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಂತೆ ಸಿದ್ದಾರ್ಥ ಗೋಯಲ್ (ಕಾ&ಸು) ಮತ್ತು ಕೆ.ರವಿಶಂಕರ್ ಡಿಸಿಪಿ ಕ್ರೈಂ ಅವರ ನಿರ್ದೇಶನದಂತೆ ಹಾಗೂ ಮಂಗಳೂರು ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪಿಎಸ್‌ಐ ಉಮೇಶ್ ಕುಮಾರ್ ಎಂ.ಎನ್ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.