Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಲ್ ಪಾವತಿಗೆ 15% ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಲ್ ಪಾವತಿಗೆ 15% ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ

    October 21, 2023
    Share
    ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ ಅರಣ್ಯ ಮತ್ತು ತೋಟಗಾರಿಕಾ ಗಿಡಗಳನ್ನು ನೀಡಲಾಗಿತ್ತು. ಇದನ್ನು ಕೆಲವು ನರ್ಸರಿಗಳ ಮೂಲಕ ಪಡೆದುಕೊಳ್ಳಲಾಗಿತ್ತು, ಅಲ್ಲದೆ ಅರಣ್ಯ ಇಲಾಖೆ ಗುತ್ತಿಗೆದಾರರಿಂದ ಗಿಡಗಳನ್ನು ನಾಟಿ ಮಾಡಿಸಿತ್ತು. ಈ ಒಟ್ಟಾರೆ ಕಾಮಗಾರಿಗೆ 50 ಲಕ್ಷದಷ್ಟು ಹಣ ಸರಕಾರದಿಂದ ಬರಬೇಕಾಗಿತ್ತು. ಈ ಹಿನ್ನಲೆ ಕೃಷಿ ಇಲಾಖೆಯಲ್ಲಿ ಅಂದು ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿರುವ ಪರಮೇಶ್ ಎನ್.ಪಿ ಅವರು ಬಿಲ್ ಬಾಕಿ ಪಾವತಿಗೆ ಮಂಗಳೂರು ವಿಭಾಗದ ಉಪಕೃಷಿ ನಿರ್ದೇಶಕರಾದ ಶ್ರೀಮತಿ ಭಾರತಮ್ಮ ಅವರಲ್ಲಿ ಕೇಳಿಕೊಂಡಿದ್ದಾರೆ. ಈ ವೇಳೆ ಅಧಿಕಾರಿ ಭಾರತಮ್ಮ ಅವರು ಬಿಲ್ ಪಾವತಿಸಬೇಕಾದರೆ ಬಿಲ್ ಮೊತ್ತದ 15 % ಹಣವನ್ನು ಮುಂಗಡವಾಗಿ ನನಗೆ ಲಂಚದ ರೂಪದಲ್ಲಿ ನೀಡಬೇಕು ಇಲ್ಲವಾದರೇ ನಾನು ಬಿಲ್ ಪಾವತಿ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹಿನ್ನಲೆ ಪರಮೇಶ್ ಅವರು ಅಕ್ಟೋಬರ್ 20 ರಂದು ಮತ್ತೆ ಅಧಿಕಾರಿ ಭಾರತಮ್ಮ ಅವರ ಹತ್ತಿರ ಮಾತನಾಡಿದಾಗ ಬಿಲ್ ಪಾವತಿಗೆ 1 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಮೇಶ್ ಅವರು ಲೋಕಾಯುಕ್ತ ದೂರು ನೀಡಿದ್ದರು. ಇಂದು ಮಂಗಳೂರು ಉಪ ಕೃಷಿ ನಿರ್ದೇಶಕಿಯಾದ ಶ್ರೀಮತಿ ಭಾರತಮ್ಮ ಅವರು ಪರಮೇಶ್ ಅವರಿಂದ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
    Post Views: 297

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.