Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು..!
    ಇತ್ತೀಚಿನ ಸುದ್ದಿ

    ಉಡುಪಿ: ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು..!

    October 22, 2023
    Share

    ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ.

    ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್‌ ಶೆಟ್ಟಿ (12) ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.
    7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಅಕ್ಕ ವರ್ಷದ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದಳು, ಅಕ್ಕನ ಸಾವಿನ ನೋವಲ್ಲಿರುವ ಪೋಷಕರಿಗೆ ಮಗನ ಸಾವು ಮತ್ತಷ್ಟು ಆಘಾತ ಉಂಟು ಮಾಡಿದೆ.
    ಶನಿವಾರ ಬೆಳಗ್ಗೆ ಮನೆಯ ಬಳಿ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಪೃಥ್ವಿರಾಜ್​ ಪೋಷಕರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಹೃದಯಾಘಾತದಿಂದ ಬಾಲಕ ಪೃಥ್ವಿರಾಜ್​ ಮೃತಪಟ್ಟಿರಬಹುದು ಎಂದು ವೃದ್ಯರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಪೃಥ್ವಿರಾಜ್ ಸಾವಿಗೆ ಕಾರಣ ತಿಳಿಯಲಿದೆ. ಮರುಕಳಿಸಿದ ದುರಂತ ಅರುಣ್​ಕುಮಾರ ಶೆಟ್ಟಿ ಹಾಗೂ ಭಾರತಿ ಶೆಟ್ಟಿ ದಂಪತಿಗೆ ಓರ್ವ ಪುತ್ರಿ ಹಾಗೂ ಪುತ್ರ ಇದ್ದು ಮಗಳು ಕಳೆದ ವರ್ಷ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಅವರ ಮನೆಯಲ್ಲಿ ಸಂಭವಿಸಿದ ಎರಡನೇ ದುರಂತ. ಕಳೆದ ವರ್ಷ ಅ.27 ರಂದು 8ನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಅನುಶ್ರೀ (14) ಮನೆಯಲ್ಲಿ ಓದುತ್ತಿರುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದರು. ಅ.20 ಪೃಥ್ವಿರಾಜ್ ಶೆಟ್ಟಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕಳೆದ ವರ್ಷ ತಮ್ಮನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದ ಅಕ್ಕ ಅನುಶ್ರೀ, ಸಂಭ್ರಮ ಮುಗಿದ ಒಂದು ವಾರದ ಒಳಗೆ ಇಹಲೋಕ ತ್ಯಜಿಸಿದ್ದರು. ಅಕ್ಕನ ನೆನಪಿನಲ್ಲೇ ದುಖಃದಿಂದ ಹುಟ್ಟುಹಬ್ಬ ಆಚರಿಸಿದ್ದ ಪ್ರಥ್ವಿ, ಮರುದಿನವೇ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿರುವುದು ದುರದೃಷ್ಟಕರ ಸಂಗತಿಯಾಗಿದೆ

    Post Views: 187

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.