Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ
    ಇತ್ತೀಚಿನ ಸುದ್ದಿ

    ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ

    October 31, 2023
    Share

    ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

    106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.

    ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ರೈತರೂ ಆಗಿದ್ದ ಆನಂದ ಆಳ್ವ ಕಷ್ಟಗಳಿಗೆ ಯಾವಾಗಲೂ ವಿಚಲಿತರಾಗಿರಲಿಲ್ಲ 1974 ರಲ್ಲಿ ಜಾರಿಗೆ ಬಂದ ಭೂ ನ್ಯಾಯಮಂಡಳಿ ಕಾಯಿದೆಯು ಕೃಷಿ ಕೈಗಳ ತೀವ್ರ ಕೊರತೆಯನ್ನು ಉಂಟುಮಾಡಿತು. ಆ ಸಮಯದಲ್ಲಿ, ಅವರು 15 ಜೋಡಿ ಎಮ್ಮೆಗಳನ್ನು ಖರೀದಿಸಿದರು ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಭತ್ತದ ಗದ್ದೆಗಳನ್ನು ಉಳುಮೆ ಮಾಡಿದ್ದರು. 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.ಅವರು ತಮ್ಮ ನೆರೆಹೊರೆಯ ಅನೇಕ ದೇವಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ.

    Post Views: 194

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.