Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»5 ಶಂಕಿತ ಉಗ್ರರ ಬಂಧನ ಪ್ರಕರಣವನ್ನು NIA ಗೆ ವರ್ಗಾಯಿಸಿದ CCB
    ಇತ್ತೀಚಿನ ಸುದ್ದಿ

    5 ಶಂಕಿತ ಉಗ್ರರ ಬಂಧನ ಪ್ರಕರಣವನ್ನು NIA ಗೆ ವರ್ಗಾಯಿಸಿದ CCB

    November 2, 2023
    Share

    ಬೆಂಗಳೂರು : ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚಿಸಿದ ಐವರು ಶಂಕಿತ ಉಗ್ರರ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಿದೆ.ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು.

    ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

    ಈ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸರಣಿ ಸ್ಫೋಟಕ್ಕೆ ಸಂಚಿರೂಪಿಸಿದ್ದರು ಅಲ್ಲದೆ ಇವರು ಗ್ರೈನೆಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಸಹ ಸಂಗ್ರಹಿಸಿದ್ದರು.ಇದಕ್ಕೆ ಜೈಲಿನಲ್ಲಿ ಇದ್ದುಕೊಂಡೇ ಉಗ್ರ ಜುನೈದ್ ಇವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗುತ್ತಿತ್ತು.

    ಆರೋಪಿಗಳು ಸುಲ್ತಾನ್​ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್​.ಟಿ ನಗರದ ಕನಕ ಬಡಾವಣೆಯ ಸೈಯದ್​ ಸುಹೇಲ್​ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

    ಈ ಐವರು ಸಂಕಿತ ಉಗ್ರರನ್ನು ಬಂಧಿಸುವ ವೇಳೆ ಇವರ ಹತ್ತಿರ ಸಂಗ್ರಹಿಸಲಾಗಿದ್ದ ಎನ್ನಲಾದ 7 ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿಗಳು, 12 ಮೊಬೈಲ್​, ಡ್ರಾಗರ್​ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು. ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿ, ಅಪರಾಧದ ಒಳಸಂಚು, ಶಸ್ತ್ರಾಸ್ರ ಕಾಯ್ದೆ ಅಡಿ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇನ್ನೂ ಇವರಿಗೆ ಮಾನಿಟರ್ ಮಾಡುತ್ತಿದ್ದ ಉಘ್ರಜನೆ ವಿದೇಶದಲ್ಲಿ ತಲೆಮರ್ಸಿಕೊಂಡಿದ್ದು ಈತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದೀಗ ದೇವರು ಸಂಗೀತ ಉಗ್ರರ ಬಂಧನ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ವರ್ಗಾಯಿಸಿದೆ.

    Post Views: 211

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.