Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ‘ಸಾರ್ವಜನಿಕ’ರೇ ಎಚ್ಚರ.! ಈ ‘ವನ್ಯಜೀವಿ ವಸ್ತು’ಗಳನ್ನು ಬಳಕೆ ಮಾಡಿದ್ರೇ ‘ಜೈಲು ಶಿಕ್ಷೆ’ ಫಿಕ್ಸ್.!
    ಇತ್ತೀಚಿನ ಸುದ್ದಿ

     ‘ಸಾರ್ವಜನಿಕ’ರೇ ಎಚ್ಚರ.! ಈ ‘ವನ್ಯಜೀವಿ ವಸ್ತು’ಗಳನ್ನು ಬಳಕೆ ಮಾಡಿದ್ರೇ ‘ಜೈಲು ಶಿಕ್ಷೆ’ ಫಿಕ್ಸ್.!

    November 2, 2023
    Share

    ಬೆಂಗಳೂರು: ವನ್ಯಜೀವಿ ವಸ್ತುಗಳನ್ನು ಇಟ್ಟಿಕೊಳ್ಳೋದು, ಬಳಕೆ ಮಾಡೋದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅನುಸಾರ ಅಪರಾಧವಾಗಿದೆ. ಒಂದು ವೇಳೆ ಇಟ್ಟುಕೊಂಡು ಸಿಕ್ಕಿಬಿದ್ರೇ ನಿಮಗೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಆದಂತೆ ಜೈಲಿ ಶಿಕ್ಷೆ ಫಿಕ್ಸ್.

    ಹೌದು ಈ ಕುರಿತಂತೆ ರಾಜ್ಯ ಸರ್ಕಾರದಿಂದ ಇಂದು ಎಲ್ಲಾ ಪತ್ರಿಕೆಗಳಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿದೆ.

    ಈ ಕಾಯ್ದೆಯಂತೆ ವನ್ಯಜೀವಿಗಳನ್ನು ಬೇಟೆ ಆಡೋದು, ಸ್ವಾಧೀನ ಪಡಿಸಿಕೊಳ್ಳೋದು, ಇಟ್ಟುಕೊಳ್ಳೋದು ಸೇರಿದಂತೆ ಖರೀದಿಸಿಸೋದು, ಸಾಗಾಣೆ ಮಾಡೋದು ಅಲ್ಲದೇ ಮಾಂಸ ಮಾರಾಟ, ಭಕ್ಷಣೆ ಕೂಡ ಅಪರಾಧವೆಂದು ತಿಳಿಸಿದೆ.

    ಇದಷ್ಟೇ ಅಲ್ಲದೇ ವನ್ಯಜೀವಿಗಳ ವಸ್ತುಗಳಾದಂತ ಕೊಂಬು, ಚರ್ಮ, ಟ್ರೋಫಿಗಳು, ಹಲ್ಲು, ಗೊರಸು ಅಥವಾ ಇವುಗಳಿಂದ ತಯಾರಾದಂತ ಆಲಂಕಾರಿಕ ವಸ್ತುಗಳ ವ್ಯಾಪಾರ, ಉಡುಗೋರೆ ನೀಡೋದು, ಪಡೆಯೋದು, ಖರೀದಿಸೋದು, ಸಾಗಾಟ ಮಾಡೋದು, ಇನ್ನೊಬ್ಬರಿಗೆ ವರ್ಗಾಯಿಸೋದು ಕೂಡ ಅಪರಾಧ. ಹೀಗೆ ಮಾಡದಂತೆ ಎಚ್ಚರಿಕೆಯನ್ನು ರಾಜ್ಯ ಅರಣ್ಯ ಇಲಾಖೆ ನೀಡಿದೆ.

    ನೀವು ಒಂದು ವೇಳೆ ಈ ಎಲ್ಲಾ ವನ್ಯಜೀವಿ ವಸ್ತುಗಳನ್ನು ಇಟ್ಟುಕೊಂಡಿದ್ದರೂ, ಮುಂದಿನ ಸಚಿವ ಸಂಪುಟ ಸಭೆಯ ವೇಳೆಯಲ್ಲಿ 2-3 ತಿಂಗಳ ಒಳಗಾಗಿ ಸರ್ಕಾರಕ್ಕೆ ಹಿಂದಿರುಗಿಸೋದಕ್ಕೆ ಅವಕಾಶವನ್ನು ನೀಡೋ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಅಂತ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕೆಲ ದಿನಗಳ ಹಿಂದೆ ತಿಳಿಸಿದ್ದರು. ಆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಕರಡು ಮಂಡಿಸಿ, ಅನುಮೋದನೆ ಪಡೆದು ಆದೇಶ ಕೂಡ ಮಾಡಲಾಗುತ್ತದೆ ಅಂತ ಹೇಳಿದ್ದಾರೆ.

    ಆದ್ರೇ ರಾಜ್ಯದ ಅನೇಕ ಜನರಿಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅನ್ವಯ ವನ್ಯಜೀವಿ ವಸ್ತುಗಳನ್ನು ಇಟ್ಟುಕೊಂಡ್ರೇ ಅಂತವರಿಗೆ ಸುಮಾರು 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿ ಎಂದು ಕೂಡ ಅರಣ್ಯ ಇಲಾಖೆ ತಿಳಿಸಿದೆ. ಇದಷ್ಟೇ ಅಲ್ಲದೇ ಶಿಕ್ಷೆಯ ಜೊತೆಗೆ 1 ಲಕ್ಷದವರೆಗೂ ದಂಡವನ್ನು ಕೂಡ ವಿಧಿಸಬಹುದಾಗಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ.

    Post Views: 350

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.