Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತ್ನಿಯನ್ನೇ ಬಾವಿಗೆ ತಳ್ಳಿ ಕೊಲೆಗೈದ ಗಂಡ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತ್ನಿಯನ್ನೇ ಬಾವಿಗೆ ತಳ್ಳಿ ಕೊಲೆಗೈದ ಗಂಡ

    November 4, 2023
    Share

    ಬೆಳ್ತಂಗಡಿ : ಬೆಳ್ತಂಗಡಿಯ ಉಜಿರೆಯ ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ ಹೆಂಡತಿಯನ್ನೇ ಗಂಡ ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದ್ದು ಆರೋಪಿ ಸುಧಾಕರನನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಳಾಲು ಗ್ರಾಮದಲ್ಲಿ ಈ ಪ್ರಕೃಣ ನಡೆದಿದ್ದು ಶುಕ್ರವಾರ ವಿವಾಹಿತ ಮಹಿಳೆ ಶಶಿಕಲರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣವೆಂದು ಭಾವಿಸಲಾಗಿತ್ತು. ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಸ್ಥಳೀಯರು ಹೇಳಿದ್ದರು. ಆದರೆ, ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹವನ್ನು ಹೊರತೆಗೆದು ಪರಿಶೀಲನೆ ಮಾಡಿದ್ದರು. ನಂತರ ಸಾವಿಗೆ ಕಾರಣವೇನೆಂದು ತನಿಖೆ ಮಾಡಿದಾಗ ಗಂಡನೇ ತನ್ನ ಹೆಂಡತಿಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂಬುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಮದುವೆಯಾಗಿ ಮಕ್ಕಳಿದ್ದರೂ ತನ್ನ ಗಂಡ ಬೇರೊಂದು ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿ ಶಶಿಕಲ ಮೇಲೆ ಆರೋಪಿ ಗಂಡ ಸುಧಾಕರ ಹಲ್ಲೆ ಮಾಡಿ, ನಂತರ ಬಾವಿಗೆ ತಳ್ಳಿದ್ದ ಎಂಬುದು ಇದೀಗ ತನಿಖೆಯಿಂದ ಬಯಲಾಗಿದೆ. ಆರೋಪಿ ಸುಧಾಕರನನ್ನು ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಸುಧಾಕರ್‌ ಹಾಗೂ ಶಶಿಕಲಾ ಕಳೆದ 7 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿದ್ದರು. ಮೊದಲು ಮನೆಯವರ ವಿರೋಧವಿದ್ದರೂ, ಅವರನ್ನು ಒಪ್ಪಿಸಿ ಮದುವೆಯೂ ಆಗಿದ್ದರು. ಆರಂಭದಲ್ಲಿ ಸುಖವಾಗಿ ಸಂಸಾರ ಮಾಡಿಕೊಂಡಿದ್ದ ದಂಪತಿಗೆ ಒಂದು ವರ್ಷದಲ್ಲಿಯೇ ಹೆಣ್ಣು ಮಗು ಜನಿಸಿತ್ತು. ಆದರೆ, ಕಳೆದೊಂದು ವರ್ಷದಿಂದ ಗಂಡನಿಗೆ ಮತ್ತೆ ಯುವತಿಯರ ಶೋಕಿ ಶುರುವಾಗಿತ್ತು. ಹೀಗಾಗಿ, ಮದುವೆಯಾಗಿ ಮನೆಯಲ್ಲಿ ಮಡದಿ ಹಾಗೀ 6 ವರ್ಷದ ಮಗಳಿದ್ದರೂ ಬೇರೊಂದು ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು ಇದೇ ಕಾರಣಕ್ಕೆ ಆಗಾಗ ಇಬ್ಬರ ಮಧ್ಯೆ ಜಗಳವೂ ಆಗುತ್ತಿತ್ತು. ಶುಕ್ರವಾರವೂ ಮನೆಯಲ್ಲಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಆಗ ಗಂಡ ಕುತ್ತಿಗೆ ಹಿಸುಕಿ ಕೊಲೆಗೈದಿದ್ದಾನೆ. ಆದರೆ, ಆಕೆ ಸಾವನ್ನಪ್ಪದೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಗ ತನ್ನ ಹೆಂಡತಿಯದ್ದು ಆತ್ಮಹತ್ಯೆ ಎಂದು ಬಿಂಬಿಸುವ ದೃಷ್ಟಿಯಿಂದ ಪ್ರಜ್ಞೆ ತಪ್ಪಿದ್ದ ಹೆಂಡತಿಯನ್ನು ಎತ್ತಿಕೊಂಡು ಹೋಗಿ ಮನೆಯ ಬಳಿಯ ಬಾವಿಗೆ ತಳ್ಳಿದ್ದಾನೆ.ನಂತರ ಕೊಲೆ ಆರೋಪ ತನ್ನ ಮೇಲೆ ಬರಬಾರದೆಂದು ಸ್ಥಳದಿಂದ ಪರಾರಿ ಆಗಿದ್ದರೂ ಬಳಿಕ ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

    Post Views: 201

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.