Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಗರದ 10–15 ಕಡೆಗಳಲ್ಲಿ ನಿಶಬ್ದ ವಲಯ ಘೋಷಣೆಗೆ ಸಿದ್ಧತೆ – ಪೊಲೀಸ್ ಕಮಿಷನರ್
    ಇತ್ತೀಚಿನ ಸುದ್ದಿ

    ಮಂಗಳೂರು: ನಗರದ 10–15 ಕಡೆಗಳಲ್ಲಿ ನಿಶಬ್ದ ವಲಯ ಘೋಷಣೆಗೆ ಸಿದ್ಧತೆ – ಪೊಲೀಸ್ ಕಮಿಷನರ್

    November 12, 2023
    Share

    ಮಂಗಳೂರು: ನಗರದ ಪ್ರಮುಖ ಆಸ್ಪತ್ರೆಗಳು, ಶಾಲಾ – ಕಾಲೇಜು ಸೇರಿದಂತೆ ಕೆಲ ವಸತಿ ಪ್ರದೇಶಗಳನ್ನು ಗುರುತಿಸಿ ನಗರದ 10 –15 ಕಡೆಗಳಲ್ಲಿ ನಿಶಬ್ದ ವಲಯ ಘೋಷಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದರು. ಕಚೇರಿಯಲ್ಲಿ ಪೊಲೀಸ್ ಫೋನ್ – ಇನ್ ಕಾರ್ಯಕ್ರಮದಲ್ಲಿ ನಗರದ ನಾಗರಿಕರೊಬ್ಬರು, ಬಿಜೈನಲ್ಲಿ ಬಸ್‌ಗಳಿಂದ ಕರ್ಕಶ ಹಾರನ್‌ಗಳು ಕೇಳುತ್ತದೆ. ತಕ್ಷಣ ಕ್ರಮಕೈಗೊಳ್ಳಬೇಕು ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಪ್ರತಿಕ್ರಿಯಿಸಿ ಈಗಾಗಲೇ ಹಂಪನಕಟ್ಟೆಯ ಲೇಡಿಗೋಶನ್ ಆಸ್ಪತ್ರೆ ವ್ಯಾಪ್ತಿಯಲ್ಲಿ ಹಾರನ್ ರಹಿತ ವಲಯವನ್ನಾಗಿ ಘೋಷಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದರು. ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್‌ ರೈಲು ನಿಲ್ದಾಣಗಳಲ್ಲಿ ಆಟೋದಲ್ಲಿ ಪ್ರೀ ಪೇಯ್ಡ್‌ಗಿಂತ ಅಧಿಕ ಹಣ ವಿಧಿಸಲಾಗುತ್ತದೆ ಎಂದು ಸಾರ್ವಜನಿಕರೊಬ್ಬರು ದೂರಿದರು. ನಗರದ ಕೆಲವು ಪ್ರಮುಖ ಹೊಟೇಲ್‍ಗಳಲ್ಲಿ ಏಜೆನ್ಸಿಗಳು ರಜಾದಿನಗಳ ಪ್ಯಾಕೇಜ್ ಎಂದು ಸದಸ್ಯತ್ವ ಮಾಡಿ ಹಣ ವಂಚನೆ ಮಾಡುತ್ತಿವೆ ಎಂದು ಕದ್ರಿಯ ನಿವಾಸಿಯೊಬ್ಬರು ತಿಳಿಸಿದರು. ಈ ಬಗ್ಗೆ ಕ್ರಮ ವಹಿಸುವಂತೆ ಕಮಿಷನರ್ ಕಿರಿಯ ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿರುವ ಪಾದಚಾರಿ ಮಾರ್ಗಗಳು ಅತಿಕ್ರಮಣವಾಗಿದ್ದು, ಕಾಲ್ನಡಿಗೆಯಲ್ಲಿ ಸಾಗುವವರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ತಿಳಿಸಿದರು. ಪಾದಚಾರಿ ಮಾರ್ಗ ಅತಿಕ್ರಮಣ ಆಗಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದ್ದು, ಇನ್ನು 3–4 ದಿನಗಳಲ್ಲಿ ಮಹಾನಗರ ಪಾಲಿಕೆ ಸಹಕಾರದಲ್ಲಿ ‘ಪಾದಚಾರಿಗಳಿಗಾಗಿ ಫುಟ್‌ಪಾತ್’ ಅಭಿಯಾನ ಆರಂಭಿಸಲಾಗುವುದು ಎಂದು ಅನುಪಮ್ ಅಗರ್ವಾಲ್ ಹೇಳಿದರು.

    Post Views: 205

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.