Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಶಕ್ತಿ ವಿದ್ಯಾಸಂಸ್ಥೆ ವತಿಯಿಂದ ‘ಶಕ್ತಿ- ಸನಾತನ ಸಂಪದ’ ಉದ್ಘಾಟನೆ
    Uncategorized

    ಮಂಗಳೂರು: ಶಕ್ತಿ ವಿದ್ಯಾಸಂಸ್ಥೆ ವತಿಯಿಂದ ‘ಶಕ್ತಿ- ಸನಾತನ ಸಂಪದ’ ಉದ್ಘಾಟನೆ

    December 1, 2023
    Share

    ಮಂಗಳೂರು: ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

    ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆ ವತಿಯಿಂದ ಶಕ್ತಿ ಕಾಲೇಜಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಗುರುವಾರ ‘ಶಕ್ತಿ- ಸನಾತನ ಸಂಪದ’ ಉಪನ್ಯಾಸ ಸರಣಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

    ಜಗತ್ತಿಗೆ ಮಾರ್ಗದರ್ಶನ ನೀಡಿದ ದೇಶ ಭಾರತ. ನಮ್ಮ ಸನಾತನ ಪರಂಪರೆಯ ಆದರ್ಶ ಚಿಂತನೆಗಳನ್ನು ಭಾರತ ಎಲ್ಲರಿಗೂ ತಿಳಿಹೇಳಿದೆ. ಜಗತ್ತಿನ ಯಾವುದೇ ದೇಶಕ್ಕೆ ತೆರಳಿದರೂ ಅಲ್ಲಿ ಭಾರತೀಯತೆಯ, ಹಿಂದುತ್ವದ ಕುರುಹು ಇದೆ. ತಾಯಂದಿರು ದೇಶಕ್ಕಾಗಿ ಹೋರಾಟ ಮಾಡಿದ ದೇಶ ಇದ್ದರೆ ಅದು ಭಾರತ ಮಾತ್ರ. ವಿಜ್ಞಾನ, ಖಗೋಳ ಜ್ಞಾನ, ಜ್ಯೋತಿಷ್ಯದಲ್ಲಿ ಭಾರತ ಪ್ರಾಚೀನ ಕಾಲದಲ್ಲೇ ಪರಿಣಿತಿ ಹೊಂದಿತ್ತು. ಮೆಕಾಲೆ ಶಿಕ್ಷಣ ಭಾರತೀಯರನ್ನು ಮಾನಸಿಕವಾಗಿ ವಿದೇಶಿಯರನ್ನಾಗಿಸಿದೆ. ಇದರಿಂದ ನಾವು ಹೊರಬರಬೇಕು. ನಾವು ಎಷ್ಟೇ ಎತ್ತರಕ್ಕೆ ಏರಿದರೂ ನಮ್ಮ ಧರ್ಮ, ಸಂಸ್ಕೃತಿ, ಜೀವನ ಮೌಲ್ಯಗಳನ್ನು ಬಿಡಬಾರದು ಎಂದರು.

    ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಗುರುಪುರ ವಜ್ರದೇಹಿ ಸಂಸ್ಥಾನದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಸನಾತನ ಎಂಬ ಶಬ್ದ ಅತ್ಯಂತ ಪ್ರಾಚೀನವಾದುದು. ಆದರೆ, ಬುದ್ದಿಜೀವಿಗಳು ಎನಿಸಿಕೊಂಡವರು ಸನಾತನದ ಬಗ್ಗೆ ಅಪಾರ್ಥ ಬರುವಂತೆ ಮಾತನಾಡುತ್ತಿರುವುದು ಸರಿಯಲ್ಲ. ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಮಾನಸಿಕತೆ ಬೆಳೆಸುವ ಶಿಕ್ಷಣ ನಮಗೆ ಬೇಡ. ಬದಲಾಗಿ ಮಾತೃಮೂಲ ಶಿಕ್ಷಣ ಸಿಗಲಿ. ಮಕ್ಕಳು ಸಂಸ್ಕಾರದ ಆಧಾರದಲ್ಲಿ ಶಿಕ್ಷಣ ಪಡೆಯಲಿ. ಅದಕ್ಕಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಮರ್ಪಕವಾಗಿ ಜಾರಿಗೊಳ್ಳಲಿ ಎಂದು ಆಶಿಸಿದರು.

    ಅಧ್ಯಕ್ಷತೆ ವಹಿಸಿದ್ದ ಶಕ್ತಿ ಎಜುಕೇಶನ್ ಟ್ರಸ್ಟ್ ಆಡಳಿತಾಧಿಕಾರಿ ಡಾ.ಕೆ. ಸಿ. ನಾೈಕ್  ಮಾತನಾಡಿ, ವಿದ್ಯಾರ್ಥಿಗಳು ದೇಶದ ಸಂಪತ್ತಾಗಿ ಬೆಳೆಯಬೇಕು ಎಂಬುದೇ ನಮ್ಮ ಹಾಗೂ ಸಂಸ್ಥೆಯ ಆಶಯ ಎಂದರು.

    ಶಕ್ತಿ ಎಜುಕೇಶನ್ ಟ್ರಸ್ಟ್ ಮುಖ್ಯ ಸಲಹೆಗಾರ ರಮೇಶ್ ಕೆ. ಮಾತನಾಡಿ, ಭಾರತೀಯ ಮೌಲ್ಯ ಹಾಗೂ ಚಿಂತನೆಗಳನ್ನು ಮಕ್ಕಳಲ್ಲಿ ಅಳವಡಿಸುವ ಉದ್ದೇಶದೊಂದಿಗೆ ಸಂಸ್ಥೆ ವತಿಯಿಂದ ‘ಶಕ್ತಿ- ಸನಾತನ ಸಂಪದ’ ಉಪನ್ಯಾಸ ಸರಣಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಮೂಲಕ ಸನಾತನ ಚಿಂತನೆಯ ಕಡೆಗೆ ಉದಾತ್ತ ಹೆಜ್ಜೆ ಇಡಲು ಶಕ್ತಿ ಸಂಸ್ಥೆ ಮುಂದಾಗಿದೆ. ತಿಂಗಳಲ್ಲಿ ಎರಡು ಶನಿವಾರ ಉಪನ್ಯಾಸ ನಡೆಯಲಿದೆ. ರಾಮಾಯಣ, ಮಹಾಭಾರತ, ಪುರಾಣ, ವೇದ, ಶೌರ್ಯ ಪರಂಪರೆ ಸಹಿತ 25 ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

    ಶಕ್ತಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಎಚ್. ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Post Views: 206

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.