Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು
    ಇತ್ತೀಚಿನ ಸುದ್ದಿ

    ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು

    December 5, 2023
    Share

    ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳಿಗೆ ಜಾಮೀನು ದೊರಕಿದೆ. ಟಿಕೆಟ್ ನೀಡುವುದಾಗಿ ವಂಚಿಸಿದ್ದಾರೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ಸೆಪ್ಟೆಂಬರ್ 8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಲಾಗಿತ್ತು. ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜಾಮೀನು ಸಿಕ್ಕಿದೆ.

    ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ‌ ಮಾಡಿದ ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂದು ಆದೇಶವನ್ನು ಹೊರಡಿಸಲಾಗಿದೆ. ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ.

    Post Views: 215

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.