Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ನಗರಸಭೆ ಅಧಿಕಾರಿಗಳಿಂದ ದಾಳಿ
    ಇತ್ತೀಚಿನ ಸುದ್ದಿ

    ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ನಗರಸಭೆ ಅಧಿಕಾರಿಗಳಿಂದ ದಾಳಿ

    December 15, 2023
    Share

    ಮಲ್ಪೆ: ಬೀಚ್ ಆಸುಪಾಸಿನಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಮಲ್ಪೆ ಬೀಚ್ ಸುತ್ತಮುತ್ತಲು ಇಪ್ಪತ್ತಕ್ಕೂ ಅಧಿಕ ಮೀನಿನ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳಿದ್ದು, ಇಲ್ಲಿ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸಿ ಇವುಗಳನ್ನು ತಿನ್ನುತ್ತಾರೆ. ರಸ್ತೆಯಂಚಿನಲ್ಲಿ ಮೀನಿನ ಫ್ರೈ, ಮಸಾಲ ಫ್ರೈ, ಚಿಕನ್ ಕಬಾಬ್, ಚೈನಿಸ್ ಆಹಾರಗಳ ಮಾರಾಟ ಮಾಡುವ ಹೋಟೆಲ್‌ಗಳಿವೆ. ಇಲ್ಲಿನ ಹೆಚ್ಚಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ, ಅತೀಯಾದ ರುಚಿ ಬರುವ ರಾಸಾಯನಿಕ ಬೆರೆಸಿ ತಯಾರು ಮಾಡುತ್ತಾರೆ ಎಂದು ಬಹಳಷ್ಟು ಪ್ರವಾಸಿಗರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ತಕ್ಷಣ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭಾ ಪೌರಾಯುಕ್ತರಿಗೆ ದಾಳಿ ನಡೆಸಿ ಪರಿಶೀಲಿಸಲು ನಿರ್ದೇಶನ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೌರಾಯುಕ್ತ ರಾಯಪ್ಪ ಅವರ ನೇತೃತ್ವದಲ್ಲಿ ನಗರಸಭೆಯ ಅಧಿಕಾರಿಗಳು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಹೆಚ್ಚಿನ ಹೊಟೇಲ್‌ಗಳಲ್ಲಿ ಮಾನವನ ಜೀವಕ್ಕೆ ಹಾನಿಕಾರಕವಾಗುವ ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಹೋಟೆಲ್‌ ಮಾಲೀಕರಿಗೆ ಎಚ್ಚರಿಕೆ ನೀಡಿರುವ ಪೌರಾಯುಕ್ತರು ಇನ್ನು ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳಿಗೆ ವಿಷಯುಕ್ತ ಬಣ್ಣ, ಟೆಸ್ಟೀ ಪೌಡರ್ ಬಳಕೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.

    Post Views: 268

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.