Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಸರಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಬಂಧನ

    December 19, 2023
    Share

    ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್‌ಟಾಪ್ ಸೇರಿದಂತೆ ಒಟ್ಟು ಸುಮಾರು 1 ಲಕ್ಷದ 20 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರಿನ ಕಸ್ಬಾ ಬೆಂಗ್ರೆಯ ನಿವಾಸಿಗಳಾದ ಮೊಹಮ್ಮದ್‌ ಆಸಿಫ್‌ ಯಾನೆ ಆಸಿಫ್‌ ಯಾನೆ ಆಚಿ (32) ಮತ್ತು ಮಹಮ್ಮದ್‌ ಸಫ್ವಾನ್‌ (21) ಬಂಧಿತರು. ಮಹಮ್ಮದ್ ಸಿನಾನ್ ಎಂಬವರು ಡಿ.1 ರಂದು ಮಂಗಳೂರು ಉತ್ತರ ದಕ್ಕೆಯ ಬಳಿ ಪಾರ್ಕಿಂಗ್ ಮಾಡಿದ್ದ ಆಕ್ಟಿವಾ ಸ್ಕೂಟರ್ ಕಳವಾದ ಬಗ್ಗೆ ಬಂದರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ ಈ ಇಬ್ಬರು ಆರೋಪಿಗಳು ಪತ್ತೆಯಾಗಿದ್ದಾರೆ. ಆರೋಪಿಗಳಿಂದ ಪಡುಬಿದ್ರೆ ನಗರ ಗ್ರಾಮ ಸೇವಾ ಕೇಂದ್ರದಿಂದ ಕಳವು ಮಾಡಿದ 2 ಲ್ಯಾಪ್ ಟಾಪ್ ಹಾಗೂ ಮಂಗಳೂರು ಉತ್ತರ ದಕ್ಕೆಯ ಪಾರ್ಕಿಂಗ್ ಸ್ಥಳದಿಂದ ಕಳವು ಮಾಡಿದ ಆಕ್ಟಿವಾ ಸ್ಕೂಟರ್ ಮತ್ತು ಮಂಕಿ ಸ್ಯ್ಟಾಂಡ್ ಬಳಿಯಿಂದ ಕಳವು ಮಾಡಿದ ಡಿಯೋ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಕದ್ರಿ ಜಂಕ್ಷನಿನ ಸ್ಕೈನೆಟ್ ಮೊಬೈಲ್ ಶಾಪ್, ವಿನಾಯಕ ಟ್ರೇಡರ್ಸ್ ಎಂಬ ಪೈಂಟ್ ಅಂಗಡಿ ಹಾಗೂ ಕದ್ರಿ ಕಂಬಳ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮುಂತಾದ ಕಡೆ ನಡೆದ ಸರಣಿ ಕಳ್ಳತನ, ಬಂಟ್ವಾಳದ ಕೈಕಂಬ ಪೊಳಲಿ ದ್ವಾರದ ಬಳಿಯ ಲೀಲಾ ಹೊಟೇಲ್, ಶರವು ಎಂಟರ್ ಪ್ರೈಸಸ್ ಎಂಬ ಅಂಗಡಿ, ಹಾಗೂ ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಮುಂತಾದ ಕಡೆ ನಡೆದ ಸರಣಿ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಕದ್ರಿ ಪೊಲೀಸ್ ಠಾಣೆಯ ಒಟ್ಟು 3 ಪ್ರಕರಣ, ಬಂಟ್ವಾಳ ನಗರ ಪೊಲೀಸ್ ಠಾಣೆಯ 3 ಪ್ರಕರಣ ಹಾಗೂ ಪಾಂಡೇಶ್ವರ ಮತ್ತು ಬಂದರು ಠಾಣೆಯ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 8 ಪ್ರಕರಣಗಳು ಈ ಆರೋಪಿಗಳ ಮೇಲಿವೆ. ಜತೆಗೆ ಮೊಹಮ್ಮದ್ ಆಸಿಫ್ ಯಾನೆ ಆಸಿಫ್ ವಿರುದ್ಧ ಬಂದರು ಮತ್ತು ಬರ್ಕೆ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಬಗ್ಗೆ ವಾರೆಂಟ್ ಕೂಡಾ ಹೊರಡಿಸಲಾಗಿತ್ತು ಎಂದು ಪೊಲೀಸ್‌ ಪ್ರಕಟನೆ ತಿಳಿಸಿದೆ.

    Post Views: 196

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.