Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ ; ಪೋಕ್ಸೋ ಕಾಯ್ದೆಯಡಿ ಬಂಧಿತ ಆರೋಪಿ ಖುಲಾಸೆ
    ಇತ್ತೀಚಿನ ಸುದ್ದಿ

    ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ ; ಪೋಕ್ಸೋ ಕಾಯ್ದೆಯಡಿ ಬಂಧಿತ ಆರೋಪಿ ಖುಲಾಸೆ

    December 20, 2023
    Share

    ಮಂಗಳೂರು ; ಭಾರತೀಯ ದಂಡ ಸಂಹಿತೆಯ ಕಲಂ 376 ( 2 ) ಬಾಲಕಿಯ ಅತ್ಯಾಚಾರ, ಕಲಂ 366 ಅಪಹರಣ , ಕಲಂ 363 ಅಪಹರಣಕ್ಕೆ ಶಿಕ್ಷೆ, ಕಲಂ 417 ಮೋಸ ಹಾಗೂ, ಕಲಂ 6 ಪೋಕ್ಸೋ ಕಾಯ್ದೆ 2012 ಅಡಿ ಲೈಂಗಿಕ ದೌರ್ಜನ್ಯ ಮತ್ತು ಕಲಂ 3 ( 2 ) ( V ), 3 ( 1 ) (ಡಬ್ಲ್ಯೂ) ( 1 ), ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) 1989 ಕಾಯ್ದೆ ಯಡಿ ದೌರ್ಜನ್ಯ ವನ್ನು ಎಸಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ಮಂಗಳೂರಿನ ಮೊದಲನೇ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯತೀರ್ಪು ನೀಡಿದೆ.

    ಕೇಸಿನ ಸಾರಾಂಶ ವೇನೆಂದರೆ, ನೊಂದ ಬಾಲಕಿಯವರು, ಆರೋಪಿಯಾದ ಎಮ್. ಡಿ. ಇಬ್ರಾರ್ @ ಮುನ್ನ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 376 ( 2 ) ಅತ್ಯಾಚಾರ, ಕಲಂ 366 ಅಪಹರಣ , ಕಲಂ 363 ಅಪಹರಣಕ್ಕೆ ಶಿಕ್ಷೆ, ಕಲಂ 417 ಮೋಸ ಹಾಗೂ, ಕಲಂ 6 ಪೋಕ್ಸೋ ಕಾಯ್ದೆ 2012 ಅಡಿ ಲೈಂಗಿಕ ದೌರ್ಜನ್ಯ ಮತ್ತು ಕಲಂ 3 ( 2 ) ( V ), 3 ( 1 ) (ಡಬ್ಲ್ಯೂ) ( 1 ), ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) 1989 ಕಾಯ್ದೆ ಯಡಿ ದೌರ್ಜನ್ಯ ವನ್ನು ಎಸಗಿರುವುದಾಗಿ ದಿನಾಂಕ 25 /3/2019 ರಂದು ಉಳ್ಳಾಲ ಪೊಲೀಸ್ ಠಾಣೆಗೆ ದೂರು ದಾಖಲಾಗಿರುತ್ತದೆ. ಅದರಂತೆ ಅಪರಾಧ ಸಂಖ್ಯೆ 34 / 2019 ಅಡಿ ಎಫ್.ಐ. ಆರ್. ಆರೋಪಿಯ ವಿರುದ್ಧ ದಾಖಲಾಗಿರುತ್ತದೆ. ಆರೋಪಿಯನ್ನು ಉಳ್ಳಾಲ ಪೊಲೀಸ್ ಠಾಣೆಯವರು ದಸ್ತಗಿರಿ ಮಾಡಿ ಅವನ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಯಿತು.

    ಈ ಕೇಸಿಗೆ ಸಂಬಂಧಿಸಿದಂತೆ, ಸ್ಪೆಷಲ್ ಕೇಸ್ ಸಂಖ್ಯೆ 68 / 2019 ಕೇಸ್ ಮಾನ್ಯ ಮೊದಲನೇ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ಮಂಗಳೂರು ಸಮ್ಮುಖದಲ್ಲಿ ಕೇಸಿನ ವಿಚಾರಣೆ ನಡೆದಿರುತ್ತದೆ. ಪಿರ್ಯಾಧಿದಾರರ ಪರವಾಗಿ, ಸಾಕ್ಷಿ ವಿಚಾರಣೆಗೆ16 ಸಾಕ್ಷಿಗಳು ವಿಚಾರಣೆಗೆ ಒಳಪಟ್ಟು ಅದೇ ರೀತಿ EX P1 to Ex P16 ದಾಖಲೆಗಳನ್ನು ಗುರುತಿಸಲಾಗಿದೆ. ಈ ಪ್ರಕರಣದ ವಿಚಾರಣೆ ಕೈಗೊಂಡ ಉಳ್ಳಾಲ ಠಾಣೆ ತನಿಖಾಧಿಕಾರಿಯು ತನಿಖೆ ನಡೆಸಿ ಮಾನ್ಯ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸತ್ರ ನ್ಯಾಯಾಲಯ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.

    ಆರೋಪಿಯ ಪರವಾಗಿ ಹಾಗೂ ಅಭಿಯೋಜಕರ ಪರವಾಗಿ ನ್ಯಾಯಾಲಯದಲ್ಲಿ ವಾದ ಹಾಗೂ ವಿವಾದ ಮಂಡನೆ ಆಗಿದ್ದು, ಅದರಂತೆ ಮಾನ್ಯ ಮೊದಲನೇ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ಮಂಗಳೂರು ಆರೋಪಿ ಹಾಗೂ ಅಭಿಯೋಜಕರ ವಾದ ಪ್ರತಿವಾದ ಬಳಿಕ ಎಲ್ಲಾ ಸಾಕ್ಷಿ ಆಧಾರಗಳನ್ನು ಪರಿಶೀಲಿಸಿ ದಿನಾಂಕ 19 /12 /2023 ರಂದು ಅಂತಿಮ ತೀರ್ಪು ನೀಡಿದೆ.

    ಮಾನ್ಯ ನ್ಯಾಯಾಲಯವು ವಾದ ಪ್ರತಿವಾದ ಆಲಿಸಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಈ ಪ್ರಕರಣದಿಂದ ದಿನಾಂಕ19/12/2023 ರಂದು ಮಾನ್ಯ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಮಂಜುಳ ಇಟ್ಟಿ ರವರು ಪ್ರಕರಣದಿಂದ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ನೀಡಿರುತ್ತಾರೆ.

    ಈ ತೀರ್ಪಿನ ಪ್ರಕಾರ ಮಾನ್ಯ ನ್ಯಾಯಾಲಯವು ಆರೋಪಿಗೆ ಎಲ್ಲಾ ಆರೋಪ ,ಪ್ರತ್ಯಾರೋಪ ಗಳಿಂದ ದೋಷ ಮುಕ್ತಗೊಳಿಸಿ, ಆರೋಪಿಯನ್ನು ಬಿಡುಗಡೆಗೊಳಿಸಿದೆ .ಪ್ರಕರಣದ ವಿಚಾರಣೆಯನ್ನು ಕೈಗೊಂಡ ಮಾನ್ಯ ನ್ಯಾಯಾಲಯವು ಸಂತ್ರಸ್ತೆ ಪರವಾಗಿ ಸರಕಾರಿ ವಕೀಲರು ವಾದಿಸಿದರು, ಆರೋಪಿಯ ಪರವಾಗಿ ವೆರಿಟಾಸ್ ಲೆಗೀಸ್ ಅಸೋಸಿಯೇಟ್ಸ್ನ ವಕೀಲರಾದ ಶ್ರೀ ರಾಘವೇಂದ್ರ ರಾವ್, ಶ್ರೀಮತಿ ಗೌರಿ ಶೆಣೈ ಮತ್ತು ಶ್ರೀಮತಿ ನವ್ಯ ಸಚಿನ್ ವಾದಿಸಿದರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

    Post Views: 224

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.