Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ವಿಕಲಚೇತನ ಮಗುವಿನ ಕೊಲೆ ಯತ್ನ- ತಡೆಯಲು ಬಂದ ತಂದೆಗೆ ಹಲ್ಲೆ
    ಇತ್ತೀಚಿನ ಸುದ್ದಿ

    ವಿಟ್ಲ: ವಿಕಲಚೇತನ ಮಗುವಿನ ಕೊಲೆ ಯತ್ನ- ತಡೆಯಲು ಬಂದ ತಂದೆಗೆ ಹಲ್ಲೆ

    December 28, 2023
    Share

    ವಿಟ್ಲ: ತಾಯಿಯೊಬ್ಬಳು ತನ್ನ ವಿಕಲಚೇತನ ಮಗುವಿನ ಗಂಟಳಿಗೆ ಕೋಲು ಹಾಕಿ ಕುತ್ತಿಗೆ ಹಿಡಿದುಕೊಲೆ ಮಾಡಲು ಯತ್ನಿಸಿದ ಘಟನೆ ಅನಂತಾಡಿ ಗ್ರಾಮದ ಕರಿಂಕ ಎಂಬಲ್ಲಿ ನಡೆದಿದೆ. ಬೆಳಿಯಪ್ಪಗೌಡ ಕುಸುಮ ದಂಪತಿಯ ಏಕೈಕ ಪುತ್ರ ದರ್ಶಿತ್(9)ಎಂಬಾತನೇ ತನ್ನ ಜನ್ಮದಾತೆಯ ರಾಕ್ಷಸೀಕೃತ್ಯಕ್ಕೆ ಒಳಗಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ನತದೃಷ್ಟ ಬಾಲಕ. ಹುಟ್ಟಿನಿಂದಲೇ ವಿಕಲಚೇತನನಾಗಿದ್ದ ದರ್ಶಿತ್ ತನ್ನ ಪೋಷಕರಿಗೆ ಏಕೈಕ ಕರುಳಕುಡಿಯಾಗಿದ್ದಾನೆ. ಅನಂತಾಡಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿರುವ ದರ್ಶಿತ್ ಪಾಲಿಗೆ ಇಂದು ಕರಾಳ ರಾತ್ರಿಯಾಗಿದೆ. ಹೆತ್ತು, ಹೊತ್ತು ಸಾಕಿ ಸಲಹಬೇಕಾಗಿದ್ದ ತಾಯಿ ಕುಸುಮ ಯಮರಾಜನ ರೂಪದಲ್ಲಿ ಬದಲಾಗಿದ್ದಾಳೆ. ತನ್ನ ಪುತ್ರನ ಕತ್ತು ಹಿಸುಕಿದ ತಾಯಿ ಕುಸುಮಾ ಅಷ್ಟಕ್ಕೂ ತೃಪ್ತಳಾಗದೇ ಆತನ ಬಾಯಿಗೆ ದೊಣ್ಣೆ ತುರುಕಿ ಕೊಲೆಗೆ ಯತ್ನಿಸಿದ್ದಾಳೆ.ಮನೆಯೊಳಗೆ ವಿಕಲಚೇತನ ಪುತ್ರನ ಕಿರುಚಾಟ ಕೇಳಿಸಿಕೊಂಡ ತಂದೆ ಬೆಳ್ಳಿಯಪ್ಪ ಗೌಡರು ಅಂಗಳದಿಂದ ಓಡಿ ಮನೆಯೊಳಗೆ ಬರುತ್ತಿದ್ದಂತೆ ಆಘಾತ ಕಾದಿತ್ತು. ಪುತ್ರನ ಮೇಲೆ ಪತ್ನಿ ನಡೆಸುತ್ತಿದ್ದ ಕೌರ್ಯ ಕಣ್ಣಾರೆ ನೋಡುತ್ತಿದ್ದಂತೆ ತಡೆಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ರಾಕ್ಷಸೀ ರೂಪ ತಾಳಿದ್ದ ಪತ್ನಿ ಕುಸುಮಾ ಪತಿಯ ಮೇಲೆ ಮುಗಿಬಿದ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ. ತಕ್ಷಣವೇ ಸ್ಥಳೀಯರು ವಿಟ್ಲದ ತುರ್ತು ವಾಹನಕ್ಕೆ ಕರೆಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರ ಸಲಹೆಯಂತೆ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕನನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಹೆತ್ತ ತಾಯಿಯೇ ತನ್ನ ವಿಕಲ ಚೇತನ ಕರುಳಕುಡಿಯ ಕೊಲೆಗೆ ಯತ್ನಿಸಿದ್ದಲ್ಲದೇ ತಡೆಯಲು ಬಂದ ಪತಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ ರಾಕ್ಷಸೀ ಕೃತ್ಯಕ್ಕೆ ಜನ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

    Post Views: 273

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.