Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್..!
    Uncategorized

    ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್..!

    January 7, 2024
    Share

    ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಬಳಿ ಮೂರು ತಿಂಗಳ ಗರ್ಭಿಣಿಯನ್ನು ಪತಿಯೇ ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸುವ ನಾಟಕವಾಡಿದ್ದ.

    23 ವರ್ಷದ ಯಸೋಧಾ ಮೃತ ಮಹಿಳೆ. ಆರೋಪಿ ಪತಿ ತಿಪ್ಪೇಶ್ (28) ನನ್ನು ಪೊಲೀಸರು ಬಂಧಿಸಿದ್ದಾರೆ.

    ಯಶೋಧಾ ಹಾಗೂ ತಿಪ್ಪೇಶ್ ಸಂಬಂಧಿಗಳೇ ಆಗಿದ್ದು, ಪ್ರೀತಿಸಿ ಆರುತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ತಿಪ್ಪೇಶ್ ಬಗ್ಗೆ ಯಶೋಧಾ ಮನೆಯವರಿಗೆ ಒಳ್ಳೆ ಅಭಿಪ್ರಾಯವಿರಲಿಲ್ಲ. ಹಾಗಾಗಿ ಮದುವೆಗೆ ಒಪ್ಪಿರಲಿಲ್ಲ. ಆದರೂ ಜೋಡಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ತಿಪ್ಪೇಶ್ ವರದಕ್ಷಿಣೆಗಾಗಿ ಕಿರುಕುಳ ನೀಡಲಾರಂಭಿಸಿದ್ದ. ಅಲ್ಲದೇ ಯಶೋಧಾ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ತವರಿಗೆ ಬಂದಿದ್ದ ಪತ್ನಿಯನ್ನು ತಿಪ್ಪೇಶ್ ವಾಪಾಸ್ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಜ.4ರಂದು ಅಪಘಾತದಲ್ಲಿ ಯಶೋಧಾ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ. ಮಗಳ ಮೃತದೇಹ ಕಂಡು ಅನುಮಾನಗೊಂಡ ಯಶೋಧಾ ತಂದೆ ಚಂದ್ರಪ್ಪ, ಇದು ಅಪಘಾತವಲ್ಲ, ಕೊಲೆ ಎಂದು ದೂರು ದಾಖಲಿಸಿದ್ದರು.

    ಆರೋಪಿ ಪತಿ ತಿಪ್ಪೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಹೆಲ್ಮೆಟ್ ನಿಂದ ಹೊಡೆದು ಪತ್ನಿಯನ್ನು ಕೊಲೆಗೈದಿದ್ದು, ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟಿದ್ದಾಗಿ ಬಾಯ್ಬಿಟ್ಟಿದ್ದಾನೆ.

    Post Views: 241

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.