Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ
    ಇತ್ತೀಚಿನ ಸುದ್ದಿ

    ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ

    January 24, 2024
    Share

    “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

    ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.

    ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.

    ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.

    ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.

    Post Views: 247

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.