Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪತಿಯ ನಿಧನದ ನಂತರ ‘ಅತ್ತೆ-ಮಾವನಿಂದ’ ಸೊಸೆಗೆ ‘ಜೀವನಾಂಶವಿಲ್ಲ’ : ಹೈಕೋರ್ಟ್ ತೀರ್ಪು
    ಇತ್ತೀಚಿನ ಸುದ್ದಿ

    ಪತಿಯ ನಿಧನದ ನಂತರ ‘ಅತ್ತೆ-ಮಾವನಿಂದ’ ಸೊಸೆಗೆ ‘ಜೀವನಾಂಶವಿಲ್ಲ’ : ಹೈಕೋರ್ಟ್ ತೀರ್ಪು

    March 10, 2024
    Share

    ಬೆಂಗಳೂರು : ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿದೆ.

    ಅಲ್ಲದೆ, ಈ ಕುರಿತಾಗಿ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದೆ.

    ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು. ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಮರುಪರಿಶೀಲನಾ ಅರ್ಜಿ ವಜಾಗೊಳಿಸುವಂತೆ ಪ್ರತಿವಾದಿ ಪರ ವಕೀಲರು ಮನವಿ ಮಾಡಿದರು.ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು. ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಮರುಪರಿಶೀಲನಾ ಅರ್ಜಿ ವಜಾಗೊಳಿಸುವಂತೆ ಪ್ರತಿವಾದಿ ಪರ ವಕೀಲರು ಮನವಿ ಮಾಡಿದರು.

    ಏನಿದು ಪ್ರಕರಣ?:

    ಅರ್ಜಿದಾರರು ಮಗನ ನಿಧನದ ನಂತರ ಸೊಸೆ ತನಗೆ ಹಾಗೂ ತನ್ನ ನಾಲ್ಕು ಮಕ್ಕಳಿಗೆ ಮಾಸಿಕ ಜೀವನಾಂಶ ನೀಡುವಂತೆ ಕೋರಿ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯವು ಮಾಸಿಕ 20,000 ಹಾಗೂ ಮಕ್ಕಳಿಗೆ 5,000 ರೂ. ಪಾವತಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆಕೆಯ ಅತ್ತೆ-ಮಾವ ಹೈಕೋರ್ಟ್ ಮೇಟ್ಟಿಲೇರಿದ್ದರು.

    ಆರ್‌ಪಿಸಿ ಸೆಕ್ಷನ್ 125ರ ಅನ್ವಯ ಸೊಸೆಗೆ ಹಾಗೂ ಮೊಮ್ಮಕ್ಕಳಿಗೆ ಮಾಸಿಕ ಜೀವನಾಂಶ ನೀಡುವಂತೆ ಆದೇಶಿಸಿದ್ದ ತೀರ್ಪು ಪ್ರಶ್ನಿಸಿ ಮೃತ ಪತಿಯ ಅಪ್ಪ ಅಮ್ಮ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

    Post Views: 262

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.