Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ- ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಉಡುಪಿ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ- ಗಂಭೀರ ಗಾಯ

    March 25, 2024
    Share

    ಉಡುಪಿ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ.

    ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.ಆತ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್‌ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ.

    ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ.

    ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ ನಾಯಿಗಳೆರಡನ್ನೂ ತಿಂದು ಹಾಕಿದೆ.

    ಕಳೆದ ನವೆಂಬರ್‌ನಲ್ಲಿ ಇದೇ ಪರಿಸರದ ಕಲ್ಲೊಟ್ಟು ದೇವಣ್ಣ ನಾಯಕ್‌ ಅವರ ಮನೆಯ ಸಾಕು ನಾಯಿಯನ್ನು ಚಿರತೆ ಬೇಟೆಯಾಡಿ ಅರ್ಧ ತಿಂದು ಹಾಕಿ ಉಳಿದರ್ಧ ದೇಹವನ್ನು ಮಲ್ಲಿಗೆ ಗಿಡದ ತೋಟದ ಬಳಿ ಬಿಟ್ಟು ಹೋಗಿತ್ತು ಎಂದು ತಿಳಿದು ಬಂದಿದೆ.

    Post Views: 164

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.