Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬಜರಂಗದಳ ಜಿಲ್ಲಾ ನಾಯಕ ಭರತ್ ಕುಮ್ಡೇಲು ಗಡಿಪಾರು
    ಇತ್ತೀಚಿನ ಸುದ್ದಿ

    ಮಂಗಳೂರು : ಬಜರಂಗದಳ ಜಿಲ್ಲಾ ನಾಯಕ ಭರತ್ ಕುಮ್ಡೇಲು ಗಡಿಪಾರು

    April 4, 2024
    Share

    ಮಂಗಳೂರು : ಬಜರಂಗದಳದ ಪುತ್ತೂರು ವಿಭಾಗದ ನಾಯಕ ಭರತ್ ಕುಮ್ಡೇಲುಗೆ ಗಡಿಪಾರು ಆದೇಶ ಜಾರಿಯಾಗಿದೆ. ಬಜರಂಗದಳ ಪುತ್ತೂರು ವಿಭಾಗದ ಸಂಯೋಜಕ ಭರತ್ ಕುಮ್ಡೇಲು ಮೇಲೆ ಕೊಲೆ, ಕೊಲೆ ಯತ್ನ, ದೊಂಬಿ, ಹಲ್ಲೆ ಮೊದಲಾದ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲುಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ನೋಟಿಸ್ ಜಾರಿಯಾಗಿದೆ. ಭರತ್ ಕುಮ್ಡೇಲುಗೆ ಗಡಿಪಾರು ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಂಯೋಜಕ್ ಪುನೀತ್ ಅತ್ತಾವರ ಹೇಳಿಕೆ ನೀಡಿ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್ ಸುಮಾರು ವರ್ಷಗಳಿಂದ ಸಂಘಟನೆಯಲ್ಲಿ ಜೋಡಿಸಿಕೊಂಡು ಧರ್ಮ ರಕ್ಷಣೆ, ಗೋಸಂರಕ್ಷಣೆ, ಮಾತೆಯರ ರಕ್ಷಣೆ ಅಲ್ಲದೆ ಮಾದಕ ದ್ರವ್ಯ, ಡ್ರಗ್ಸ್ ವಿರುದ್ಧ ಕೆಲಸ ಮಾಡುತ್ತಿದ್ದರು. ಆದರೆ, ರಾಜಕೀಯ ದ್ವೇಷದಿಂದ ಚುನಾವಣೆಯ ಸಂದರ್ಭ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳದಂತೆ ಕಾಂಗ್ರೆಸ್ ಸರಕಾರದ ಷಡ್ಯಂತ್ರ ರೂಪಿಸಿ ಭರತ್ ಕುಮ್ಡೇಲ್ ಅವರಿಗೆ ಗಡಿಪಾರು ನೋಟಿಸ್ ಜಾರಿಗೊಳಿಸಿದೆ. ರಾಜ್ಯಸರ್ಕಾರದ ಈ ಹಿಂದೂ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ. ಗಡಿಪಾರು ಮೂಲಕ ಬಜರಂಗದಳ ಕಾರ್ಯಕರ್ತರನ್ನು ಧಮನಿಸುತ್ತೇವೆ ಎಂದುಕೊಂಡಿದ್ದರೆ ಅದು ಕಾಂಗ್ರೆಸ್ ಭ್ರಮೆ. ನಿಮ್ಮ ಯಾವುದೇ ದ್ವೇಷ ರಾಜಕಾರಣದ ಅಸ್ತ್ರಕ್ಕೆ ಬಜರಂಗದಳ ಕಾರ್ಯಕರ್ತರು ಹೆದರುವುದಿಲ್ಲ. ಧರ್ಮದ, ರಾಷ್ಟ್ರದ ಕೆಲಸಕ್ಕೆ ಬಜರಂಗದಳ ಕಾರ್ಯಕರ್ತರು ಯಾವಾಗಲು ಕಟಿಬದ್ಧ. ಹಾಗಾಗಿ ಈ ಗಡಿಪಾರು ನೋಟಿಸ್ ಅನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

    Post Views: 422

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.