Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಲೋಕಸಭಾ ಚುನಾವಣೆ: ಸೌಜನ್ಯಾಪರ ಹೋರಾಟಗಾರರ ವತಿಯಿಂದ ನೋಟಾ ಜಾಗೃತಿ ಅಭಿಯಾನ
    Uncategorized

    ಲೋಕಸಭಾ ಚುನಾವಣೆ: ಸೌಜನ್ಯಾಪರ ಹೋರಾಟಗಾರರ ವತಿಯಿಂದ ನೋಟಾ ಜಾಗೃತಿ ಅಭಿಯಾನ

    April 5, 2024
    Share

    ಮಂಗಳೂರು: ಅತ್ಯಾಚಾರ ಮತ್ತು ಹತ್ಯೆಗೊಳಗಾದ ಸೌಜನ್ಯಾ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಸೌಜನ್ಯಾಪರ ಹೋರಾಟಗಾರರು ನೋಟಾ ಜಾಗೃತಿ ಅಭಿಯಾನಕ್ಕೆ ಮುಂದಾಗಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ.

    ಆದರೂ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಈ ಬಗ್ಗೆ ಯಾವುದೇ ಸಹಕಾರ ನೀಡಿಲ್ಲ. ಅಲ್ಲದೆ ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಪದ್ಮಲತಾ, ಆನೆ ಮಾವುತ, ವೇದವಲ್ಲಿ ಕೊಲೆ ಪ್ರಕರಣಗಳಿಗೂ ನ್ಯಾಯ ದೊರಕಬೇಕೆಂದು ಚುನಾವಣಾ ಆಯೋಗದ ನಿರ್ದೇಶನದಂತೆ ನೋಟಾ ಜನಜಾಗೃತಿ ಸಭೆಗಳನ್ನು ನಡೆಸಿ ಅತೀ ಹೆಚ್ಚು ನೋಟಾಕ್ಕೆ ಮತ ಬೀಳುವಂತೆ ಕರೆ ನೀಡಲಾಗುತ್ತದೆ.

    ಇದಕ್ಕಾಗಿ ಸೌಜನ್ಯಾಪರ ಹೋರಾಟದ ರೂವಾರಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ ಅಭಿಯಾನ ನಡೆಸಲಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ ಮತ ಬೀಳವಂತೆ ಕರೆ ನೀಡಲಾಗುತ್ತದೆ. ಇದಕ್ಕಾಗಿ ಮನೆಮನೆಗಳಿಗೆ ತೆರಳಿ ನೋಟಾಕ್ಕೆ ಮತ ಹಾಕುವಂತೆ ವಿನಂತಿಸಲಾಗುತ್ತದೆ‌.

    ಅಲ್ಲಲ್ಲಿ ಸಭೆಗಳನ್ನು ನಡೆಸಲಾಗುತ್ತದೆ. ಎಪ್ರಿಲ್ 24ರಂದು ಸುಳ್ಯದಲ್ಲಿ ಲೋಕಸಭಾ ಕ್ಷೇತ್ರ ಮಟ್ಟದ ಬೃಹತ್ ನೋಟಾ ಜನಜಾಗೃತಿ ಸಭೆ ನಡೆಸಲಾಗುತ್ತದೆ. ರಾಷ್ಟ್ರೀಯ ಪಕ್ಷಗಳ ಹಾಗೂ ನ್ಯಾಯಾಂಗದ ಗಮನ ಸೆಳೆಯಲು ಈ ಅಭಿಯಾನ ನಡೆಸಲಾಗುತ್ತದೆ‌. ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೋಟಾ ಮತ ಚಲಾವಣೆ ಆದರೆ ವ್ಯವಸ್ಥೆಯ ಗಮನ ಸೆಳೆಯಲು ಸಾಧ್ಯ ಎಂಬುದು ಹೋರಾಟಗಾರರ ಅಭಿಪ್ರಾಯ.

    Post Views: 266

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.