Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬೊಂಡಾ ಪ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ..!
    ಇತ್ತೀಚಿನ ಸುದ್ದಿ

    ಮಂಗಳೂರು : ಬೊಂಡಾ ಪ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ..!

    April 11, 2024
    Share

    ಮಂಗಳೂರು : ಅಡ್ಯಾರ್ ನಲ್ಲಿರುವ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥೆ ಬೊಂಡಾ ಪ್ಯಾಕ್ಟರಿಯಲ್ಲಿ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥರಾದ ಘಟನೆ ನಡೆದಿದ್ದು, ಇದೀಗ ಬೊಂಡಾ ಪ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಎಳನೀರು ಸ್ಯಾಂಪಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

    ಎಪ್ರಿಲ್ 8 ರಂದು ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿ ಕುಡಿದ ಕಾರಣ ದಿನಾಂಕ 9.4.2024 ರಂದು ಬೆಳಗ್ಗೆಯಿಂದ ಸಂಜೆಯ ತನಕ ವಾಂತಿ ಮತ್ತು ಭೇದಿಯಿಂದ ಬಳಲಿರುತ್ತಾರೆ. ಇದರಿಂದ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಸೋಮವಾರ ಸಂಜೆ ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ ವಾಂತಿಬೇದಿಯಿಂದ ಬಳಲಿದ್ದು ಸ್ಥಳೀಯ ವೈದ್ಯರುಗಳಲ್ಲಿ ಪರೀಕ್ಷಿಸಿ ಔಷಧೋಪಚಾರ ಪಡೆದು ಗುಣಮುಖರಾಗದೆ ಮೂರು ಮಂದಿ ಪಲ್ನೀರ್ ನಲ್ಲಿರುವ ಹೈ ಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತಿದ್ದಾರೆ.ಅವರ ಆರೋಗ್ಯ ಸ್ಥಿರವಾಗಿದೆ.ಉಳಿದ 12 ಮಂದಿ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ ಮುಂತಾದ ಕಡೆ ಹೆಚ್ಚಿನ ಔಷಧೋಪಚಾರವನ್ನು ಹೊರರೋಗಿಗಳಾಗಿ ಪಡೆದಿರುತಾರೆ.

    ಬುಧವಾರದಂದು ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಇವರಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಕೆಯಾಗಿದ್ದು ತಕ್ಷಣವೇ ಇವರಿಬ್ಬರೂ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿ ಇಲ್ಲಿಗೆ ಭೇಟಿ ನೀಡಿ ಎಳನೀರಿನ ಸ್ಯಾಂಪಲನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

    ಇಡೀ ಫ್ಯಾಕ್ಟರಿಯನ್ನು ತಥಾಕಾಲಿಕವಾಗಿ ಬಂದ್ ಮಾಡಿ ಶುಚಿಗೊಳಿಸಲಾಗಿದೆ. ಪಲ್ನೀರ್ ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲೆ ಯಾಗಿರುವ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ವ್ಯದ್ಯರೊಂದಿಗೆ ಚರ್ಚೆಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ, ಆಹಾರ ಸುರಕ್ಷತಾ ಅಂಕಿತ ಅಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ ಇವರ ತಂಡ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿರುತ್ತಾರೆ.

    Post Views: 305

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.