Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಣ್ಣೂರು: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
    ಇತ್ತೀಚಿನ ಸುದ್ದಿ

    ಕಣ್ಣೂರು: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

    April 30, 2024
    Share

    ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ (ಏ.29 ರಂದು) ನಡೆದಿದೆ.

    ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.

    ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್‌ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.

    ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Post Views: 308

    Related Posts

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.