Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸುರಕ್ಷಿತ- ಇಂಡಿಯನ್‌ ಆಯಿಲ್‌ ಸ್ಪಷ್ಟನೆ..!
    ಇತ್ತೀಚಿನ ಸುದ್ದಿ

    ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸುರಕ್ಷಿತ- ಇಂಡಿಯನ್‌ ಆಯಿಲ್‌ ಸ್ಪಷ್ಟನೆ..!

    May 3, 2024
    Share

    ನವದೆಹಲಿ: ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಇಂಡಿಯನ್‌ ಆಯಿಲ್‌ ಸ್ಪಷ್ಟಪಡಿಸಿದೆ. ಕಡುಬೇಸಿಗೆಯಲ್ಲಿ ವಾಹನಗಳಿಗೆ ಫುಲ್‌ ಟ್ಯಾಂಕ್‌ ಪೆಟ್ರೋಲ್‌, ಡೀಸೆಲ್‌ ಹಾಕಿಸಬೇಡಿ ಎಂದು ವಾಹನ ಸವಾರರಿಗೆ ಇಂಡಿಯನ್‌ ಆಯಿಲ್‌ ಕಂಪನಿ ಎಚ್ಚರಿಕೆ ನೀಡಿದೆ ಎಂಬ ಸುದ್ದಿ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ಕಂಪನಿ ಸ್ಪಷ್ಟೀಕರಣ ನೀಡಿದೆ. ಆಟೋಮೊಬೈಲ್ ತಯಾರಕರು ಕಾರ್ಯಕ್ಷಮತೆಯ ಅಗತ್ಯತೆ ಮತ್ತು ಅಂತರ್ನಿರ್ಮಿತ ಸುರಕ್ಷತಾ ಅಂಶಗಳೊಂದಿಗೆ ಸುತ್ತುವರಿದ ಪರಿಸ್ಥಿತಿಗಳ ಎಲ್ಲಾ ಅಂಶಗಳನ್ನು ಪರಿಗಣಿಸಿ ವಾಹನಗಳನ್ನು ವಿನ್ಯಾಸಗೊಳಿಸುತ್ತಾರೆ. ಪೆಟ್ರೋಲ್/ಡೀಸೆಲ್ ವಾಹನಗಳಿಗೆ ಇಂಧನ ಟ್ಯಾಂಕ್‌ನಲ್ಲಿ ಸೂಚಿಸಲಾದ ಗರಿಷ್ಠ ಪರಿಮಾಣವು ಇದಕ್ಕೆ ಹೊರತಾಗಿಲ್ಲ. ಆದ್ದರಿಂದ ಚಳಿಗಾಲ ಅಥವಾ ಬೇಸಿಗೆಗಾಲ ಯಾವುದೇ ಆಗಲಿ ನಿರ್ದಿಷ್ಟಪಡಿಸಿದ ಗರಿಷ್ಠ ಮಿತಿಯವರೆಗೆ ವಾಹನಗಳಲ್ಲಿ ಇಂಧನ ತುಂಬುವುದು ಸಂಪೂರ್ಣ ಸುರಕ್ಷಿತ ಎಂದು ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೆಟ್ರೋಲ್ ಡೀಲರ್ಸ್ ಅಸೋಸಿಯೇಶನ್ ಪುಣೆ (ಪಿಡಿಎಪಿ) ಅಧ್ಯಕ್ಷ ಧ್ರುವ್ ರೂಪಾರೆಲ್ ಅವರು, ಬೇಸಿಗೆಯಲ್ಲಿ ಫುಲ್‌ ಟ್ಯಾಂಕ್‌ ಪೆಟ್ರೋಲ್‌, ಡೀಸೆಲ್‌ ತುಂಬಿಸಬೇಡಿ ಎಂದು ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಗ್ಯಾಸ್ ಹೊರಹೋಗಲು ಟ್ಯಾಂಕ್‌ನಲ್ಲಿ ಜಾಗವಿರುತ್ತದೆ. ಇಂಧನವು ಉಷ್ಣತೆಯ ವ್ಯತ್ಯಾಸಗಳೊಂದಿಗೆ ವಿಸ್ತರಿಸುವುದು ಮತ್ತು ಸಂಕುಚಿತಗೊಳ್ಳುವುದು ಆಗುತ್ತದೆ. ಅದು ಬೆಂಕಿ ಸಂಪರ್ಕಕ್ಕೆ ಬರದ ಹೊರತು ಎಂದಿಗೂ ಸ್ವತಃ ಸ್ಫೋಟಗೊಳ್ಳುವುದಿಲ್ಲ. ಆಧುನಿಕ ಇಂಧನ ಟ್ಯಾಂಕ್‌ಗಳನ್ನು ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ವಿನ್ಯಾಸಗೊಳಿಸಲಾಗಿದೆ. ಇದನ್ನು ವಾಹನ ಚಾಲಕರು ಅರ್ಥಮಾಡಿಕೊಳ್ಳಬೇಕು. ಕಂಪನಿ ಅಥವಾ ಸರ್ಕಾರಿ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರಕಟವಾಗದ ಸುದ್ದಿಗಳನ್ನು ಜನರು ನಂಬಬೇಡಿ ಎಂದು ತಿಳಿಸಿದ್ದಾರೆ.

    Post Views: 267

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.