Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

    May 19, 2024
    Share

    ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಕೋರೆಯನ್ನು ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಪೊಲೀಸರು ರಾತ್ರಿಯೇ ಮನೆಗೆ ನುಗ್ಗಿ ಆತನನ್ನು ವಶಕ್ಕೆ ಪಡೆದಿದ್ದಾರೆ ಈ ಹಿನ್ನಲೆ ಕಾರ್ಯಕರ್ತರ ಜೊತೆಗೆ ತಡರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ, ಪೊಲೀಸರನ್ನು ಏರು ಸ್ವರದಲ್ಲಿ ದಬಾಯಿಸಿದ್ದಾರೆ.

    ನೀವು ಕಾಂಗ್ರೆಸ್ ಏಜಂಟರ ರೀತಿ ವರ್ತಿಸ್ತೀರಿ, ನೀವು ಯಾರ ಒತ್ತಡದಲ್ಲಿ ಕೆಲಸ ಮಾಡ್ತಿದೀರಿ ಅಂತ ಗೊತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಿದೆ ಅಂತ ನಿಮಗೆ ದರ್ಪ ಇದೆ ಎಂದು ಹೇಳಿದ ಶಾಸಕ ಪೂಂಜ, ಪ್ರೊಸೀಜರ್ ಎಂದು ಹೇಳಿದ ಒಬ್ಬ ಪೊಲೀಸ್ ಅಧಿಕಾರಿಗೆ ನಿಮ್ಮ ಪ್ರೊಸೀಜರ್ ಬಗ್ಗೆ ನನಗೆ ನಿಮಗಿಂತ ಹೆಚ್ಚು ಗೊತ್ತಿದೆ. ಎಫ್ಐಆರ್ ಈಗ ಮಾಡಿರೋದಲ್ವಾ.. ಇದನ್ನೆಲ್ಲ ಯಾರ ಒತ್ತಡದಲ್ಲಿ ಮಾಡ್ತಿದ್ದೀರಿ ಅಂತ ನನಗೆ ಗೊತ್ತಿದೆ ಎಂದು ಜೋರು ಧ್ವನಿಯಲ್ಲಿ ಇನ್ಸ್ ಪೆಕ್ಟರ್ ಮತ್ತು ಪೊಲೀಸ್ ಪೇದೆಗಳನ್ನು ಶಾಸಕ ಪೂಂಜ ಜೋರು ಮಾಡಿದ್ದಾರೆ. ನಮ್ಮ ಕಾರ್ಯಕರ್ತನನ್ನು ಬಿಡದಿದ್ದರೆ ನಾನು ಇಲ್ಲಿಂದ ಹೋಗುವುದಿಲ್ಲ. ಇಲ್ಲಿಯೇ ಕೂರುತ್ತೇನೆಂದು ಹೇಳಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಒಂದು ಗಂಟೆಗೆ ಶಾಸಕ ಪೂಂಜ ತನ್ನ ಜೊತೆಗಿದ್ದ ಕಾರ್ಯಕರ್ತರ ಜೊತೆಗೆ ಧರಣಿ ಕುಳಿತಿದ್ದಾರೆ. ಕೆಲಹೊತ್ತು ಕುಳಿತು ಧಿಕ್ಕಾರ ಕೂಗಿದ್ದಾರೆ.

    Post Views: 197

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.