Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ತಾಯಿಯ ಶವದೊಂದಿಗೆ 4 ದಿನ ಕಳೆದು ತೀವ್ರ ಅಸ್ವಸ್ಥಗೊಂಡಿದ್ದ ಬುದ್ಧಿಮಾಂದ್ಯ ಮಗಳು ಸಾವು!
    ಇತ್ತೀಚಿನ ಸುದ್ದಿ

    ಉಡುಪಿ: ತಾಯಿಯ ಶವದೊಂದಿಗೆ 4 ದಿನ ಕಳೆದು ತೀವ್ರ ಅಸ್ವಸ್ಥಗೊಂಡಿದ್ದ ಬುದ್ಧಿಮಾಂದ್ಯ ಮಗಳು ಸಾವು!

    May 19, 2024
    Share

    ಕುಂದಾಪುರ: ತಾಯಿಯ ಶವದೊಂದಿಗೆ ಅನ್ನ ನೀರು ಇಲ್ಲದೆ ಮೂರ್ನಾಲ್ಕು ದಿನ ಕಳೆದು ತೀವ್ರ ಅಸ್ವಸ್ಥಗೊಂಡಿದ್ದ ಬುದ್ಧಿಮಾಂದ್ಯ ಮಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಹೃದಯವಿದ್ರಾವಕ ಘಟನೆ ಕುಂದಾಪುರ ತಾಲ್ಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಸಂಭವಿಸಿದೆ. ತಾಯಿ ಜಯಂತಿ ಶೆಟ್ಟಿ (62) ಹಾಗೂ ಪುತ್ರಿ ಪ್ರಗತಿ ಶೆಟ್ಟಿ (32) ಮೃತರು. ತೀವ್ರ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಅವರು, ಹುಟ್ಟಿನಿಂದಲೇ ಬುದ್ಧಿಮಾಂದ್ಯಳಾಗಿದ್ದ ಪುತ್ರಿ ಪ್ರಗತಿ ಶೆಟ್ಟಿ ಜತೆ ವಾಸವಿದ್ದರು. ಈಚೆಗೆ ಜಯಂತಿ ಶೆಟ್ಟಿ ಮೃತಪಟ್ಟಿದ್ದಾರೆ. ಈ ವೇಳೆ ಬುದ್ಧಿಮಾಂದ್ಯ ಪುತ್ರಿ ಏನು ಮಾಡಬೇಕು ಎಂದು ತೋಚದೆ ತಾಯಿಯ ಶವದ ಜತೆಗೆ ಮೂರ್ನಾಲ್ಕು ದಿನ ಕಳೆದಿದ್ದಾರೆ. ಮನೆಯ ಸುತ್ತಲೂ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು, ಕಿಟಕಿ ತೆರೆದು ನೋಡಿದಾಗ ಜಯಂತಿ ಶೆಟ್ಟಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಜತೆಗೆ ಮಗಳು ಪ್ರಗತಿ ಶೆಟ್ಟಿ ಕೂಡ ತೀವ್ರ ಅಸ್ವಸ್ಥಗೊಂಡಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಕುಂದಾಪುರ ಪೊಲೀಸರು ಮನೆಯ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಗತಿ ಶೆಟ್ಟಿ ಅವರನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಗತಿ ಶೆಟ್ಟಿ ಶನಿವಾರ ಮೃತಪಟ್ಟಿದ್ದಾರೆ. ತಾಯಿ ಹಾಗೂ ಮಗಳ ಮೃತ ದೇಹಗಳ ಅಂತ್ಯಸಂಸ್ಕಾರ ಹೆಂಗವಳ್ಳಿಯಲ್ಲಿ ನಡೆಸಲಾಯಿತು.

    Post Views: 454

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.