Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಖೋಟಾ ನೋಟು ವಿನಿಮಯ : ಕೇರಳ ಮೂಲದ ಇಬ್ಬರು ಅಂದರ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಖೋಟಾ ನೋಟು ವಿನಿಮಯ : ಕೇರಳ ಮೂಲದ ಇಬ್ಬರು ಅಂದರ್

    May 20, 2024
    Share

    ಬಂಟ್ವಾಳ : ಖೋಟಾ ನೋಟುಗಳನ್ನು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ತಂಡವನ್ನು ಭೇದಿಸಿದ್ದ ಬಂಟ್ವಾಳ ನಗರ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ಪೊಲೀಸ್‌ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಕೇರಳದಲ್ಲಿ ಸ್ವಾಧೀನದಲ್ಲಿಟ್ಟು ಕೊಂಡಿದ್ದ ಒಟ್ಟು 506 ನೋಟುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಮೇ 10 ರಂದು ಬಿ.ಸಿ.ರೋಡಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ಮಾಹಿತಿಯಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸ್ ನಿರೀಕ್ಷಕ ಆನಂತಪದ್ಮನಾಭ ನೇತೃತ್ವದ ಪೋಲೀಸರ ತಂಡ ಕೇರಳ ಮೂಲದ ಇಬ್ಬರನ್ನು ಬಂಧಿಸಿದ್ದರು.

    ಕಾಸರಗೋಡಿನ ಕೂಡ್ಲು ಗ್ರಾಮದ ಚೂರಿ ನಿವಾಸಿಗಳಾದ ಮೊಹಮ್ಮದ್‌ ಸಿ.ಎ.(61) ಹಾಗೂ ಕಮರುನ್ನೀಸಾ (41) ಬಂಧಿತ ಆರೋಪಿಗಳಾಗಿದ್ದು, ಪೊಲೀಸ್‌ ಕಾರ್ಯಾಚರಣೆ ವೇಳೆ ಇನ್ನೋರ್ವ ಆರೋಪಿ ಶರೀಫ್‌ ಪರಾರಿಯಾಗಿದ್ದನು. ಆರೋಪಿಗಳಿಂದ 500 ರೂ. ಮುಖ ಬೆಲೆಯ 46 ಖೋಟಾ ನೋಟುಗಳು, 5,300 ರೂ.ನಗದು ಹಾಗೂ 3 ಮೊಬೈಲ್‌, ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದು, ಕೇರಳದಲ್ಲಿ ಸ್ವಾಧೀನದಲ್ಲಿಟ್ಟುಕೊಂಡಿದ್ದ ಒಟ್ಟು 2,30,000/- ರೂಪಾಯಿ ಮೌಲ್ಯದ 500/- ರೂಪಾಯಿಯ 460 ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಹಿಂದಿನ ನೋಟುಗಳು ಸೇರಿ ಒಟ್ಟು ವಶಪಡಿಸಿಕೊಂಡ ನೋಟುಗಳ ಸಂಖ್ಯೆ 506 ಆಗಿದೆ.

    ಆರೋಪಿಗಳು ಕೇರಳದಿಂದ ಖೋಟಾ ನೋಟುಗಳನ್ನು ತಂದು ಬಿ.ಸಿ.ರೋಡು ಭಾಗದ ಸಣ್ಣ ಅಂಗಡಿಗಳಿಗೆ ತೆರಳಿ ವಿನಿಮಯ ಮಾಡುತ್ತಿರುವ ಸತ್ಯವನ್ನು ಪೊಲೀಸ್‌ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದರು. ಇಲ್ಲಿನ ಸಣ್ಣ ಅಂಗಡಿಗಳಿಗೆ ಗ್ರಾಹಕರ ಸೋಗಿನಲ್ಲಿ ತೆರಳಿ ಕಡಿಮೆ ಬೆಲೆಯ ಸಣ್ಣಪುಟ್ಟ ವಸ್ತುಗಳನ್ನು ಖರೀದಿಸಿ 500 ರೂ. ಮುಖ ಬೆಲೆಯ ಖೋಟಾ ನೋಟುಗಳನ್ನು ನೀಡುತ್ತಿದ್ದರು. ಬಳಿಕ ಅವರಿಂದ ಬಾಕಿ ಮೊತ್ತವನ್ನು ಪಡೆದು ಅಲ್ಲಿಂದ ಪರಾರಿಯಾಗುತ್ತಿದ್ದರು. ಹೀಗೆ ಹಲವು ಭಾಗಕ್ಕೆ ತೆರಳಿ ತಮ್ಮಲ್ಲಿರುವ ಖೋಟಾ ನೋಟುಗಳನ್ನು ಚಲಾವಣೆ ಮಾಡುವ ಯೋಜನೆ ಅವರದ್ದಾಗಿತ್ತು. ಸಾರ್ವಜನಿಕರ ಮಾಹಿತಿಯಂತೆ ಬಂಟ್ವಾಳ ನಗರ ಪೊಲೀಸರು ಖೋಟಾ ನೋಟು ದಂಧೆಯನ್ನು ಭೇದಿಸಿದ್ದಾರೆ.

    ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ಅಡಿಷನಲ್‌ ಎಸ್ಪಿಗಳಾದ ಜಗದೀಶ್‌, ರಾಜೇಂದ್ರ ಕೆ.ವಿ., ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್‌ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಪೊಲೀಸ್‌ ಇ‌ನ್‌ಸ್ಪೆಕ್ಟರ್‌ ಅನಂತಪದ್ಮನಾಭ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ಹಾಗೂ ರಾಮಕೃಷ್ಣ, ಸಿಬ್ಬಂದಿಗಳಾದ ರಾಜೇಶ್ ಎಸ್, ಇರ್ಷಾದ್ ಪಿ , ಮನೋಹರ, ಗಣೇಶ್, ಮೋಹನ್, ಬಸವರಾಜ್ ಕಮ್ಮಾರ್, ರಂಗನಾಥ್, ಕುಮಾರಿ ಅರ್ಪಿತಾ ರವರು ಕಾರ್ಯಚರಣೆಯಲ್ಲಿ ಸಹಕರಿಸಿದ್ದಾರೆ.

    ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರವರು, ಪತ್ತೆ ತಂಡವನ್ನು ಪ್ರಶಂಸಿಸಿದ್ದು, ನಗದು ಬಹುಮಾನವನ್ನು ಘೋಷಿಸಿರುತ್ತಾರೆ.

    Post Views: 239

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.