Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಿಗೆ ಮತದಾನದ ಹಕ್ಕಿನಿಂದ ವಂಚನೆ”-ಭಾಸ್ಕರ್ ಶೆಟ್ಟಿ ಟಿ.
    ಇತ್ತೀಚಿನ ಸುದ್ದಿ

    “ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಿಗೆ ಮತದಾನದ ಹಕ್ಕಿನಿಂದ ವಂಚನೆ”-ಭಾಸ್ಕರ್ ಶೆಟ್ಟಿ ಟಿ.

    May 30, 2024
    Share

    ಮಂಗಳೂರು: “ನೈರುತ್ಯ ಶಿಕ್ಷಕರ ಕ್ಷೇತ್ರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ. ನವೀಕರಣದ ಹೆಸರಲ್ಲಿ ಶಿಕ್ಷಕರ ಗಮನಕ್ಕೆ ಬಾರದೆ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ. ಇದನ್ನು ಚುನಾವಣೆ ಆಯೋಗದ ತಪ್ಪು ಎಂದು ಹೇಳಲಾಗುವುದಿಲ್ಲ. ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರ ಇರುವುದು ಸ್ಪಷ್ಟ. ಅನೇಕ ಮಂದಿ ಶಿಕ್ಷಕರು ಈ ಬಗ್ಗೆ ನಮ್ಮಲ್ಲಿ ದೂರು ನೀಡಿದ್ದಾರೆ. ಅನೇಕ ಮಂದಿ ಹೊಸದಾಗಿ ಆರ್ಜಿ ಹಾಕಿದ್ದರೂ ಚುನಾವಣಾ ಆಯೋಗ ಅದನ್ನು ಗಮನಿಸಿಲ್ಲ” ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿರುವ ಭಾಸ್ಕರ್ ಶೆಟ್ಟಿ ಟಿ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


    “ಹೆಸರು ಮಾತ್ರ ಶಿಕ್ಷಕರ ಕ್ಷೇತ್ರ ಎಂದಾಗಿದ್ದು ಈ ಕ್ಷೇತ್ರವನ್ನು ಆಳುವವರು ಮಾತ್ರ ಬೇರೆಯೇ ಆಗಿದ್ದಾರೆ. ಈ ಕಾರಣಕ್ಕಾಗಿ ಓರ್ವ ಶಿಕ್ಷಕನಾಗಿ ಈ ಕ್ಷೇತ್ರದ ಆಳ ಅರಿವು ಬಲ್ಲ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಈಗಾಗಲೇ ಕರ್ನಾಟಕ ಚುನಾವಣೆ ಆಯೋಗದ ಮುಖ್ಯಸ್ಥರಿಗೆ ದೂರು ನೀಡಲಾಗಿದೆ. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ನಾವು ಹೈಕೋರ್ಟ್ ಮೊರೆ ಹೋಗಿದ್ದೇವೆ. ನೈರುತ್ಯ ಕ್ಷೇತ್ರದ ಚುನಾವಣೆ ಪ್ರಕ್ರಿಯೆಯನ್ನು ನಿಲ್ಲಿಸಿ ಮತದಾನದಿಂದ ವಂಚಿತರಾಗಿರುವ ಶಿಕ್ಷಕರಿಗೆ ತಕ್ಷಣವೇ ಅವಕಾಶ ನೀಡಬೇಕು. ನಂತರ ಚುನಾವಣೆ ಪ್ರಕ್ರಿಯೆಯನ್ನು ಶುರು ಮಾಡಬೇಕು. ಯಾವುದೇ ಶಿಕ್ಷಕರು ತಮ್ಮ ಸಮಸ್ಯೆ ಹೇಳಿಕೊಳ್ಳಬೇಕಿದ್ದಲ್ಲಿ 7022862057 ನಂಬರಿಗೆ ಕರೆ ಮಾಡಿ” ಎಂದು ಮನವಿ ಮಾಡಿದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರೊ. ವಸಂತರಾಜ್ ಶೆಟ್ಟಿ, ವಕೀಲ ಮಂಜುನಾಥ್, ಪ್ರೊ. ಸುಬ್ಬಣ್ಣ ಶೆಟ್ಟಿ, ಉದ್ಯಮಿ ರತ್ನಾಕರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ರಮೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

    Post Views: 214

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.