Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

    June 6, 2024
    Share

    ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಇದೀಗ ಗ್ಯಾರಂಟಿ ಯೋಜನೆಗಳಿಗೆ ಜನ ಮನ್ನಣೆ ದೊರಕಿಲ್ಲ ಅನ್ನೋ ಕಾರಣಕ್ಕೆ ಕಾಂಗ್ರೆಸ್‌ನ ಕೆಲ ನಾಯಕರು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗ್ಯಾರಂಟಿ ಯಯೋಜನೆಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಪುನರ್‌ ಪರಿಶೀಲನೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದಕ್ಕೆ ಒಪ್ಪದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ಈ ನಾಯಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.

    ರಾಜ್ಯದ ಎಲ್ಲ ಆರ್ಥಿಕ ಸಂಪನ್ಮಲಗಳನ್ನು ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ವ್ಯಯಿಸುತ್ತಿದೆ. ಇಷ್ಟಾಗಿಯೂ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ಆಗಿಲ್ಲ. ಇದರರ್ಥ, ಸ್ಕೀಂಗಳು ಜನರ ಮನಸ್ಸು ಗೆದ್ದಿಲ್ಲ. ಗ್ಯಾರಂಟಿಗಾಗಿ ಅಭಿವೃದ್ಧಿ ಹತೋಟಿಯಲ್ಲಿಡಲಾಗಿದೆ, ಶಾಸಕರ ಅನುದಾನಕ್ಕೆ ಕತ್ತರಿ ಹಾಕಲಾಗಿದೆ. ಹೀಗಾಗಿ ರಾಜ್ಯದಲ್ಲಿ ಜಾರಿ ಮಾಡಲಾಗಿರುವ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಯನ್ನು ನಡೆಸಬೇಕು ಅನ್ನೋದು ಬಹುತೇಹ ಶಾಸಕರ ವಾದವಾಗಿದೆ.

    ಚುನಾವಣಾ ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, , ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ. 20 ಸ್ಥಾನಗಳವರೆಗೆ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ, 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಷ್ಟೇ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

    ಒಟ್ಟಾರೆಯಾಗಿ ಶಾಸಕರು ಗ್ಯಾರಂಟಿ ಯೋಜನೆಗಳ ಕುರಿತಂತೆ ಚರ್ಚಿಸಿದಾಗ ಅದನ್ನ ನಿಲ್ಲುಸುವುದಿಲ್ಲ ಎಂದು ಸಿಎಂ ಪ್ರತಿಕ್ರಯಿಸಿದ್ದಾರೆ ಎನ್ನಲಾಗಿದೆ.

    Post Views: 284

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.