Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

    June 12, 2024
    Share

    ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ಕಲ್ಲಡ್ಕ ಸಮೀಪದ ಬೊಂಡಾಲ ಎಂಬಲ್ಲಿನ ಸಂತ್ರಸ್ತ ಮಹಿಳೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಮಹಿಳೆಯ ಸ್ವಂತ ಊರು ಹಾಸನ ತಾಲೂಕಿನ‌ ಬೇಲೂರು ಆಗಿದ್ದು, ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿದೆ.

    ಮಹಿಳೆಯ ಊರು ಹಾಸನದಲ್ಲಿ ಪ್ರಮೋದ್ ರಿಕ್ಷಾ ಚಾಲಕನಾಗಿದ್ದ. ಒಂದೆರೆಡು ಬಾರಿ ತಾಯಿ ಮನೆಗೆ ಈತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ‌ನಂ.ನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ.

    ಮೊಬೈಲ್ ಮೂಲಕ ಈತನ‌ ಸಂಪರ್ಕ ಅತಿಯಾಗಿ ಕಳೆದ ಕೆಲ ಸಮಯದ ಹಿಂದೆ ಗಂಡನ ಮನೆ ಕಲ್ಲಡ್ಕಕ್ಕೆ ಬಂದಿದ್ದ. ಮನೆಗೆ ಬಂದ ಈತ ಮಹಿಳೆಗೆ ಕೀಟಲೆ ನೀಡಿದ್ದಲ್ಲದೇ, ಮನೆಯೊಳಗಿದ್ದ ಅನೇಕ ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದ. ಈ ಸಂದರ್ಭದಲ್ಲಿ ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು ಎಂದು ಹೇಳಲಾಗಿದೆ.

    ಇದೀಗ ಮತ್ತೆ ಹಾಸನದಿಂದ ಬಂಟ್ವಾಳಕ್ಕೆ ಬಂದಿಳಿದ ಆರೋಪಿ ‌ಪ್ರಮೋದ್ ಮತ್ತೆ ಗಂಡನಿಲ್ಲದ ಸಮಯ ನೋಡಿಕೊಂಡು ಮಹಿಳೆಯ ಮನೆಗೆ ನುಗ್ಗಿದ್ದಾನೆ. ಮಹಿಳೆಯನ್ನು ತಬ್ಬಿ ‌ಹಿಡಿದು ಲೈಂಗಿಕವಾಗಿ ಉಪಯೋಗಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

    ಮಹಿಳೆ ಜೋರಾಗಿ ಬೊಬ್ಬೆ ಹೊಡೆದಾಗ ಮನೆಯ ‌ಸಮೀಪದ ದೇವಾಲಯದೊಳಗೆ ಇದ್ದ ಗಂಡ ಬಂದು ರಕ್ಷಣೆ ಮಾಡಿದ್ದಾನೆ ಎಂದು ‌ಹೇಳಲಾಗಿದೆ.

    ಈ ಸಂದರ್ಭದಲ್ಲಿ ಮಹಿಳೆಗೆ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ, ಗಂಡ ಮಗುವಿನ ಜೊತೆ ಸೇರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಇದೀಗ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾ‌ಣಾ ಪೋಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ‌ಹಾಜರು ಪಡಿಸಿದ್ದಾರೆ.

    Post Views: 240

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.