Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಹನ ಸವಾರರಿಗೆ ಬಿಗ್‌ ರಿಲೀಫ್‌ : ‘HSRPʼ ನಂಬರ್ ಪ್ಲೇಟ್’ ಅಳವಡಿಕೆಗೆ ಗಡುವು ವಿಸ್ತರಣೆ..!
    ಇತ್ತೀಚಿನ ಸುದ್ದಿ

    ವಾಹನ ಸವಾರರಿಗೆ ಬಿಗ್‌ ರಿಲೀಫ್‌ : ‘HSRPʼ ನಂಬರ್ ಪ್ಲೇಟ್’ ಅಳವಡಿಕೆಗೆ ಗಡುವು ವಿಸ್ತರಣೆ..!

    June 13, 2024
    Share

    ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್‌ ರಿಲೀಫ್‌ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.

    ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು.

    ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್‌-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಿ, ಆದೇಶಿಸಿದೆ.

    ಇದಕ್ಕೆ ಸೋಂಧಿ ಅವರು ಗಡುವು ವಿಸ್ತರಿಸಿ ಆ ಸಂಬಂಧದ ಅಧಿಸೂಚನೆಯನ್ನು ಪೀಠದ ಮುಂದೆ ಇಡಲು ಸರ್ಕಾರಕ್ಕೆ ಅನುಮತಿಸಬಹುದು. ಆದರೆ, ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ಕೋರಿದರು.

    ಇದಕ್ಕೆ ಸಮ್ಮತಿಸಿದ ಪೀಠವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿದ್ದ ಗಡುವು ವಿಸ್ತರಿಸಲು ಅನುಮತಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು. ಹೀಗಾಗಿ ರಾಜ್ಯದಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಪಡಿಸಲಾಗಿದ್ದಂತ ಗಡುವು ಸೆಪ್ಟೆಂಬರ್ ವರೆಗೂ ವಿಸ್ತರಣೆಯಾದಂತೆ ಆಗಿದೆ.

    Post Views: 430

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.