Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ! ಅರ್ಹ ಬಾಲಕಿಯರ ಖಾತೆಗೆ ಬೀಳಲಿದೆ 1 ಲಕ್ಷ ಹಣ
    ರಾಜ್ಯ ಸುದ್ದಿ

    ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ! ಅರ್ಹ ಬಾಲಕಿಯರ ಖಾತೆಗೆ ಬೀಳಲಿದೆ 1 ಲಕ್ಷ ಹಣ

    June 20, 2024
    Share

    ಚಿತ್ರದುರ್ಗ ಜಿಲ್ಲೆಯ 1647 ಬಾಲಕಿಯರು, ಹದಿನೆಂಟು ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ ತಲಾ ಒಂದು ಲಕ್ಷ ರೂ. ಲಾಭವನ್ನು ಪಡೆಯಲಿದ್ದಾರೆ.

    ಜಿಲ್ಲೆಯಲ್ಲಿಈ ಯೋಜನೆಯಡಿ ನೋಂದಾಯಿಸಿದ ಹದಿನೆಂಟು ವರ್ಷ ಪೂರ್ಣಗೊಂಡ ಏಪ್ರಿಲ್‌ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಬೆನಿಫಿಷರ್‌ಗೆ ಅರ್ಹರಾಗಿದ್ದು, ಈ ಹಣ ಇನ್ನೆರಡು ತಿಂಗಳಲ್ಲಿಅರ್ಹ ಫಲಾನುಭವಿಗಳ ಖಾತೆಗೆ ಆದ್ಯತೆ ಮೇರೆಗೆ ಜಮೆ ಆಗಲಿದೆ. ಈಗಾಗಲೇ ಅಗತ್ಯ ದಾಖಲೆಗಳನ್ನು ಇಲಾಖೆಯು ಪಡೆಯಲು ಮುಂದಾಗಿದೆ.

    ಲಿಂಗಾನುಪಾತ ಉತ್ತಮ ಪಡಿಸಲು, ಹೆಣ್ಣು ಭ್ರೂಣ ಹತ್ಯೆ ತಡೆಯಲು, ಬಾಲ್ಯ ವಿವಾಹ ಪದ್ಧತಿಗೆ ಬ್ರೇಕ್‌ ಹಾಕಲು, ಹೆಣ್ಣು ಮಗುವಿನ ಶಿಕ್ಷಣ, ಆರೋಗ್ಯ ಮಟ್ಟ ಉತ್ತಮ ಪಡಿಸಿ ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಸರಕಾರವು ನಿಶ್ಚಿತ ಠೇವಣಿ ಹೂಡಿ, ಈ ಮಗುವಿಗೆ ಹದಿನೆಂಟು ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ವ ಹಣ ನೀಡುವ ಸದುದ್ದೇಶದಿಂದ 2006-07 ರಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಗೆ ಪ್ರಸ್ತುತವಾಗಿ ಹದಿನೆಂಟು ವರ್ಷವಾಗಿರುವ ಹಿನ್ನೆಲೆ ಎಲ್ಲ ತಾಲೂಕುಗಳ ಸಿಡಿಪಿಒ ಇಲಾಖೆಯು ಪರಿಪಕ್ವ ಹಣ ನೀಡಲು ಈಗಾಗಲೇ ಅರ್ಹರಿಂದ ಅರ್ಜಿ ಮತ್ತು ಅಗತ್ಯ ದಾಖಲೆ ಸಂಗ್ರಹಿಸುತ್ತಿದೆ.

    ಈ ಯೋಜನೆಯ ಹಣ ಪಡೆಯಲು ಬಿಪಿಎಲ್‌ ಕಾರ್ಡ್‌, ಶಾಶ್ವತ ಕುಟುಂಬ ಯೋಜನೆ ಅಳವಡಿಸಿಕೊಂಡು ಮೂರು ಮಕ್ಕಳು ಮೀರಿರದಂತಿರಬೇಕು. (ಬಹುಪತಿ-ಪತ್ನಿಯರನ್ನು ಹೊಂದಿದ್ದರೂ ಎರಡು ಹೆಣ್ಣು ಮಕ್ಕಳು ಯೋಜನೆಯಡಿ ಅರ್ಹರು). ಫಲಾನುಭವಿ ಮಗು ಕಡ್ಡಾಯವಾಗಿ 8ನೇ ತರಗತಿ ವಿದ್ಯಾಭ್ಯಾಸ ಮಾಡಿದ ದೃಢೀಕರಣ, ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗಿರಬಾರದು ಎನ್ನುವ ನಿಯಮಕ್ಕೆ ಬದ್ಧರಾಗಿರುವ ಹೆಣ್ಣು ಮಕ್ಕಳಿಗೆ ಮಾತ್ರ ಈ ಹಣ ದೊರೆಯಲಿದೆ.

    Post Views: 233

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.