Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪತಿಯ ಕೊಲೆಗೈದ ಪ್ರಕರಣ; ಪತ್ನಿ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪತಿಯ ಕೊಲೆಗೈದ ಪ್ರಕರಣ; ಪತ್ನಿ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

    July 3, 2024
    Share

    ಮಂಗಳೂರು: ನಗರದಲ್ಲಿ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಎಂದು ತಿಳಿಯಲಾಗಿದೆ.

    ಘಟನೆ ಹಿನ್ನೆಲೆ:

    ಈ ಘಟನೆ 2016ರಲ್ಲಿ ನಡೆದಿತ್ತು. ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್‌ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್‌ ಅಹಮ್ಮದ್‌ (38), ಉಳ್ಳಾಲದ ಅಬ್ದುಲ್‌ ಮುನಾಫ್ ಆಲಿಯಾಸ್‌ ಮುನ್ನ (41), ಉಳ್ಳಾಲದ ಅಬ್ದುಲ್‌ ರೆಹಮಾನ್‌ (36) ಮತ್ತು ಬೋಳಿಯಾರ್‌ನ ಶಬೀರ್‌ (31) ಶಿಕ್ಷೆಗೊಳಗಾದವರು ಎಂದು ತಿಳಿದು ಬಂದಿದೆ.

    ಇಸ್ಮಾಯಿಲ್‌ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್‌ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್‌ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು ಎನ್ನಲಾಗಿದೆ.

    ಜಮೀಲ್‌ನ ಜತೆ ಸೇರಿ ಪತಿ ಇಸ್ಮಾಯಿಲ್‌ನನ್ನು ಕೊಲೆ ಮಾಡಲು ನೆಬಿಸಾ ಸಂಚು ರೂಪಿಸಿದ್ದಳು. ಜಮಾಲ್‌ ತನ್ನ ಸ್ನೇಹಿತ ಆಟೋರಿಕ್ಷಾ ಚಾಲಕ ಅಬ್ದುಲ್‌ ರೆಹಮಾನ್‌ ಜತೆ ಅಬ್ದುಲ್‌ ಮುನಾಫ್ ಬಳಿ ತೆರಳಿ 2.50 ಲ.ರೂ.ಗಳಿಗೆ ಕೊಲೆ ಸುಪಾರಿ ನೀಡಿದ್ದರು. ಇಸ್ಮಾಯಿಲ್‌ ಫ‌ರಂಗಿಪೇಟೆಯಲ್ಲಿ ಮೂರು ವಾಹನಗಳನ್ನು ಹೊಂದಿ ಬಾಡಿಗೆ ನಡೆಸುತ್ತಿದ್ದರು. ಆರೋಪಿಗಳು 2016ರ ಫೆ. 16ರಂದು ಸಂಜೆ ಇಸ್ಮಾಯಿಲ್‌ ಬಳಿ ಹೋಗಿ ಬೆಂಗಳೂರಿಗೆ ಬಾಡಿಗೆ ಇದೆ ಎಂದು ಕರೆದುಕೊಂಡು ಹೋಗಿದ್ದರು. ಅದರಂತೆ ಏಸ್‌ ವಾಹನದಲ್ಲಿ ತೆರಳಿದ್ದರು. ಇವರ ಜತೆ ಇನ್ನೋರ್ವ ಆರೋಪಿ ಚಾಲಕ ಶಬೀರ್‌ ಕೂಡ ಜತೆಯಾಗಿದ್ದ. ದಾರಿ ಮಧ್ಯೆ ನೆಲ್ಯಾಡಿ ಬಳಿ ಬಾರ್‌ನಲ್ಲಿ ಇಸ್ಮಾಯಿಲ್‌ಗೆ ಮದ್ಯ ಕುಡಿಸಿದ್ದರು. ಅನಂತರ ಮುಂದಕ್ಕೆ ಶಿರಾಡಿ ರಕ್ಷಿತಾರಣ್ಯದ ಕೆಂಪುಹೊಳೆ ತಲುಪಿದಾಗ ವಾಹನ ಕೆಟ್ಟು ಹೋಯಿತು. ಅಲ್ಲಿ ಆರೋಪಿಗಳು ಮತ್ತೆ ಇಸ್ಮಾಯಿಲ್‌ಅವರಿಗೆ ಮದ್ಯಪಾನ ಮಾಡಿಸಿದರು. ಕಾಡಿನಲ್ಲಿ ಯುವತಿಯೋರ್ವಳು ಇದ್ದಾಳೆ ಎಂದು ಆಮಿಷವೊಡ್ಡಿ ರಾತ್ರಿ 11.30ರ ಸುಮಾರಿಗೆ ಕಾಡಿನ ನಡುವೆ ಕರೆದುಕೊಂಡು ಹೋಗಿ ತಾವು ತಂದಿದ್ದ ಚೂರಿಯಿಂದ ಇಸ್ಮಾಯಿಲ್‌ ಅವರನ್ನು ಇರಿದು ಕೊಲೆ ಮಾಡಿದ್ದರು. ಮೃತದೇಹವನ್ನು ಅಲ್ಲಿಯೇ ತಗ್ಗಾದ ಸ್ಥಳದಲ್ಲಿಟ್ಟು ತರೆಗೆಲೆ, ಮಣ್ಣು ಹಾಕಿ ಮುಚ್ಚಿಟ್ಟಿದ್ದರು. ವಾಹನವನ್ನು ಮರಳಿ ಉಪ್ಪಿನಂಗಡಿ ಬಜತ್ತೂರಿನ ನೀರಕಟ್ಟೆಗೆ ತಂದು ನಿಲ್ಲಿಸಿದ್ದರು. ಇಸ್ಮಾಯಿಲ್‌ನ ಮೊಬೈಲ್‌ ಮತ್ತು ಬಟ್ಟೆಯನ್ನು ತಂದು ನೇತ್ರಾವತಿ ನದಿಗೆ ಎಸೆದಿದ್ದರು.

    ಒಂದೆಡೆ ಸುಪಾರಿಯ ಹಣವನ್ನು ನೀಡುವುದಕ್ಕಾಗಿ ಚಿನ್ನವನ್ನು ಗಿರವಿ ಇಟ್ಟ ನೆಬಿಸಾ, ಇನ್ನೊಂದೆಡೆ ಪತಿ ಇಸ್ಮಾಯಿಲ್‌ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದಳು.

    ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ ಪರವಾಗಿ ಆರಂಭದಲ್ಲಿ ಸರಕಾರಿ ಅಭಿಯೋಜಕರಾದ ವಿ.ಶೇಖರ ಶೆಟ್ಟಿ ವಾದ ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕರಾದ ಚೌಧರಿ ಮೋತಿಲಾಲ್‌ ಅವರು ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರಾದ ಜುಡಿತ್‌ ಎಂ.ಒ.ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್‌ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಕೊಣಾಜೆ ಠಾಣೆಯ ಇನ್‌ಸ್ಪೆಕ್ಟರ್‌ ಅಶೋಕ್‌ ಪಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು‌.

    ಒಂದು ದಿನದ ಬಳಿಕ ವಾಹನ ಪತ್ತೆಯಾಗಿತ್ತು.

    ಇಸ್ಮಾಯಿಲ್‌ನ ವಾಹನ ಬಜತ್ತೂರಿನ ನೀರಕಟ್ಟೆಯಲ್ಲಿ ಫೆ.18ರಂದು ಪತ್ತೆಯಾಗಿ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ವಾಹನದೊಳಗೆ ರಕ್ತದ ಕಲೆಗಳು ಕೂಡ ಇದ್ದವು. ಇದನ್ನು ಗಮನಿಸಿದ ಇಸ್ಮಾಯಿಲ್‌ ಅವರ ಪುತ್ರ (ಮೊದಲನೇ ಪತ್ನಿಯ ಪುತ್ರ) ನೆಬಿಸಾ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನೆಬಿಸಾಳನ್ನು ತನಿಖೆಗೆ ಒಳಪಡಿಸಿದಾಗ ಪ್ರಕರಣ ಬಯಲಿಗೆ ಬಂದಿತ್ತು.

    ಶಿಕ್ಷೆ ಪ್ರಕಟ:

    ನ್ಯಾಯಾಧೀಶರಾದ ಕಾಂತಜಾರು ಎಸ್‌.ವಿ. ಅವರು ಆರೋಪಿಗಳ ಅಪರಾಧ ಸಾಬೀತಾಗಿರುವುದರಿಂದ ಐಪಿಸಿ 302ರಂತೆ ಜೀವಾವಧಿ ಹಾಗೂ 2 ಲ.ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಮತ್ತೆ ಹೆಚ್ಚುವರಿ 2 ವರ್ಷ ಕಾರಾಗೃಹ, ಐಪಿಸಿ 201ರಡಿ 7 ವರ್ಷ ಕಠಿನ ಸಜೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಕಾರಾಗೃಹ, ಐಪಿಸಿ 120ರಡಿ 7 ವರ್ಷ ಕಠಿನಸಜೆ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಇಸ್ಮಾಯಿಲ್‌ ಅವರ ಮಕ್ಕಳಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಮಾಡಿದ್ದಾರೆ.

    Post Views: 300

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.