Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ

    July 5, 2024
    Share

    ಮಂಗಳೂರು: ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಒಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಆಕ್ಟಿವಾದಲ್ಲಿ ಆಗಮಿಸಿದ ಆರೋಪಿಗಳು ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸ್ಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಗೆ ನುಗ್ಗಿದ್ದಾರೆ. ಆರೋಪಿಗಳು ಚಿಕ್ಕ ಆಸಿಡ್ ತುಂಬಿದಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್‌ಗೆ ಬಲಾತ್ಕಾರವಾಗಿ ಕೈ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ತಡೆಯಲು ಯತ್ನಿಸಿದ ಫೈನಾನ್ಸ್ನ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ದೂಡಿ ಹಾಕಿದ್ದು, ಮಹಿಳಾ ಸಿಬ್ಬಂದಿ ಜೋರಾಗಿ ಕಿರುಚಿದ ಸಂದರ್ಭ ಆರೋಪಿಗಳು ಪರಾರಿಯಾಗಿರುತ್ತಾರೆ.ಮೂವರು ಆರೋಪಿಗಳ ಪೈಕಿ ಒಬ್ಬ ಹೆಲೈಟ್ ಧಾರಿ ಸ್ಕೂಟರನ್ನು ಸ್ಟಾರ್ಟಿಂಗ್‌ನಲ್ಲಿಯೇ ನಿಲ್ಲಿಸಿ ಕಾಯುತ್ತಿದ್ದು, ಇನ್ನಿಬ್ಬರ ಪೈಕಿ ಒಬ್ಬ ಬುರ್ಖಾಧಾರಿಯಾಗಿದ್ದು ಸವಾರನ ಹಿಂಬದಿಯಲ್ಲಿ ಕುಳಿತಿದ್ದ ಚಲನವಲನಗಳನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿರುತ್ತಾರೆ. ಈತ ಬುರ್ಖಾ ಧರಿಸಿದ್ದರೂ ಗಂಡಸ್ಸೇ ಕುಳಿತಿದ್ದುದು ಹಲವರ ಗಮನಕ್ಕೆ ಬಂದಿದೆ.ಫೈನಾನ್ಸ್ಗೆ ನುಗ್ಗಿದ ಇಬ್ಬರಲ್ಲಿ ಒಬ್ಬ ಹೆಲೈಟ್ ಹಾಗೂ ರೈನ್ ಕೋಟ್ ಧರಿಸಿಯೇ ಇದ್ದ. ದರೋಡೆಗೆ ಯತ್ನಿಸಿದ ಮೂವರು ಅಪರಿಚಿತರ ತಂಡ ಒಂದೇ ಸ್ಕೂಟರ್‌ನಲ್ಲಿ ಅತಿವೇಗದಿಂದ ಮಸೀದಿ ಪಕ್ಕದ ರಸ್ತೆಯ ಮುರಾ ಜಂಕ್ಷನ್ ಮೂಲಕ ಕೊಳಂಬೆ ಮಾರ್ಗವಾಗಿ ಗುರುಪುರ ಕೈಕಂಬ ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.ಆರೋಪಿಗಳು ತಂದಿಟ್ಟ ಆಸಿಡ್ ಕ್ಲೋರೋಫಾರ್ಮ್ ಎನ್ನಲಾಗಿದ್ದು ಹೆಚ್ಚುವರಿ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವ್ಯವಸ್ಥಿತ ಸಂಚು ನಡೆಸಿ ದರೋಡೆಯ ಪ್ರಯತ್ನ ನಡೆಸಿರುವುದರ ಹಿಂದೆ ಜಾಲವೊಂದರ ಕೈವಾಡ ಇರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 215

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.