Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಬ್ಬುಸ್ವಾಮಿ ಕಾಣಿಕೆ ಡಬ್ಬಿ ಕದ್ದ ಕಳ್ಳ:  24 ಗಂಟೆಯೊಳಗೆ ಹುಡುಕಿಕೊಟ್ಟ ದೈವ..!
    ಇತ್ತೀಚಿನ ಸುದ್ದಿ

    ಉಡುಪಿ: ಬಬ್ಬುಸ್ವಾಮಿ ಕಾಣಿಕೆ ಡಬ್ಬಿ ಕದ್ದ ಕಳ್ಳ:  24 ಗಂಟೆಯೊಳಗೆ ಹುಡುಕಿಕೊಟ್ಟ ದೈವ..!

    July 12, 2024
    Share

    ಉಡುಪಿ: ಬಬ್ಬು ಸ್ವಾಮಿ ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು ದೈವ 24 ಗಂಟೆಯೊಳಗೆ ಹುಡುಕಿಕೊಟ್ಟ ಅಚ್ಚರಿಯ ಘಟನೆ ಉಡುಪಿಯಲ್ಲಿ ನಡೆದಿದೆ.

    ಚಿಟ್ಪಾಡಿ ಕಸ್ತೂರ್ಬಾ ನಗರದ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳ್ಳತನ ನಡೆದಿತ್ತು. ಕಳ್ಳನೊಬ್ಬ ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಿದ್ದನು. ಜು.5 ರಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು.

    ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಸಾಮೂಹಿಕ ಪ್ರಾರ್ಥನೆ ಮಾಡಿದ್ದರು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನಿಸಿದ್ದರು. ಮಾತ್ರವಲ್ಲದೆ, ಊರಿನ ಸಂಕಷ್ಟ ಬಗೆಹರಿಸುವ ದೈವದ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

    ಭಕ್ತರ ಪ್ರಾರ್ಥನೆಯಿಂದ ಕಳ್ಳನನ್ನು 24 ಗಂಟೆಯೊಳಗೆ ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅಚ್ಚರಿ ಎಂಬಂತೆ ಜು. 6ರಂದು ಬೆಳಗ್ಗೆ ಕಳ್ಳನನ್ನು ಸಿಕ್ಕಿದ್ದಾನೆ.

    ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಮಲಗಿರೋದು ಗೊತ್ತಾಗಿದೆ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕರು ಕಳ್ಳನ ಗುರುತು ಪತ್ತೆ ಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಬಾಗಲಕೋಟೆ ಮೂಲದ ಮುದುಕಪ್ಪ ಕಾಣೆಕೆ ಡಬ್ಬಿ ಕದ್ದು ಸಿಕ್ಕಿಬಿದ್ದ ಕಳ್ಳ. ಈತ ಬಾಗಲಕೋಟೆಗೆ ಹೋಗಬೇಕಾದವನು ಬಸ್ ನಿಲ್ದಾಣದಲ್ಲಿಯೇ ನಿದ್ದೆ ಮಾಡಿ ಬಾಕಿಯಾಗಿದ್ದನು. ಬೆಳಿಗ್ಗೆ ಎಂಟು ಗಂಟೆಯಾದರೂ ನಿದ್ದೆ ಮಂಪರಿನಲ್ಲಿ ಮಲಗಿದ್ದನು.

    ಮುದುಕಪ್ಪ ದೈವಸ್ಥಾನಗಳಲ್ಲಿ ಕಳ್ಳತನ ಮಾಡುವ ಚಾಳಿಯನು ಹೊಂದಿದ್ದನು. ಚಿಟ್ಪಾಡಿಯ ನಂತರ ಉದ್ಯಾವರ ಪರಿಸರದಲ್ಲೂ ಕಳ್ಳತನ ಮಾಡಿದ್ದನು. ದೋಚಿದ ಹಣದೊಂದಿಗೆ ಬಾಗಲಕೋಟೆಗೆ ಹೋಗಲು ತಯಾರಿ ನಡೆಸಿದ್ದನು. ಬಸ್ ಸಿಗದ ಕಾರಣ ಮಲಗಿದ್ದಲ್ಲೇ ಬಾಕಿಯಾಗಿದ್ದನು. ಆದರೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ. ಇತ್ತ ಭಕ್ತರು ಬಬ್ಬು ಸ್ವಾಮಿ ದೈವದ ಕಾರ್ಣಿಕಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    Post Views: 214

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.