Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಲ್ಕು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು – ಆರು ಮಂದಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ನಾಲ್ಕು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು – ಆರು ಮಂದಿ ಅರೆಸ್ಟ್

    July 13, 2024
    Share

    ಮಂಗಳೂರು: ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳವು ಹಾಗೂ ಪಂಪ್‌ವೆಲ್‌ ಕಪಿತಾನಿಯೋ ಬಳಿಯ ಅಂಗಡಿಗಳವು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸರು ನಾಲ್ವರನ್ನು ಬಂಧಿಸಿ 10ಲಕ್ಷ ನಗದು ಸೇರಿದಂತೆ 12.50ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರದ ಮಹಮ್ಮದ್ ಸಿಯಾಬ್, ಬಜ್ಪೆಯ ಮಹಮ್ಮದ್ ಅರ್ಫಾಝ್, ಸಫ್ವಾನ್ ಹಾಗೂ ಉತ್ತರಪ್ರದೇಶ ಮೂಲದ ಮಹಮ್ಮದ್ ನಜೀರ್ ಹೌಸಿಲ್ ಖಾನ್ ಮತ್ತು ಇಲಿಯಾಸ್ ಖಾನ್ ಬಂಧಿತ ಆರೋಪಿಗಳು. ಕಳೆದ 2-3 ತಿಂಗಳಿನಿಂದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲ 3ಮನೆಗಳಲ್ಲಿ ಕಳವು ನಡೆದಿತ್ತು. ಪ್ರಕರಣದಲ್ಲಿ 9,25,000 ಲಕ್ಷ ಮೌಲ್ಯದ ಸೊತ್ತು ಕಳವಾಗಿತ್ತು. ಜುಲೈ 10ರಂದು ಮುದುಂಗಾರಕಟ್ಟೆ, ಚೆಕ್ ಪಾಯಿಂಟ್‌ ಬಳಿ ಬಂದ ಕಾರನ್ನು ಪೊಲೀಸರು ತಪಾಸಣೆ ನಡೆಸಿದಾಗ ಕಾರ್‌ನಲ್ಲಿ ಮಾರಕಾಯುಧ, ಮಂಕಿಕ್ಯಾಪ್, ಹ್ಯಾಂಡ್‌ಗ್ಲೌಸ್ ಪತ್ತೆಯಾಗಿದೆ‌. ತಕ್ಷಣ ಅದನ್ನು ವಶಪಡಿಸಿ, ಕಾರಿನಲ್ಲಿದ್ದ ಮೂವರನ್ನು ಬಂಧಿಸಲಾಗಿತ್ತು. ಈ ಮೂವರು ಮನೆಗಳವು ನಡೆಸಿದವರೆಂದು ಅವರು ಒಪ್ಪಿದ್ದಾರೆ‌. ಆರೋಪಿಗಳು ಮಾಹಿತಿಯಂತೆ ಮಹಮ್ಮದ್ ಜಂಶೀರ್‌ ಎಂಬಾತನನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಜುಲೈ 8ರಂದು ರಾತ್ರಿ ಪಂಪ್‌ವೆಲ್ ಕಪಿತಾನಿಯೊದ ದಿನಸಿ ಅಂಗಡಿ ಶೆಟರ್ ಮುರಿದು ಕ್ಯಾಶ್ ಕೌಂಟರ್‌ನಲ್ಲಿದ್ದ 10.20ಲಕ್ಷ ನಗದು ದೋಚಲಾಗಿತ್ತು. ಪ್ರಕರಣದ ಬೆನ್ನುಬಿದ್ದ ಪೊಲೀಸರಿಗೆ ರಿಕ್ಷಾ ಡ್ರೈವರ್‌ಗಳಿಂದ ರಾತ್ರಿ ವೇಳೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ರೈಲ್ವೇ ನಿಲ್ದಾಣದಲ್ಲಿ ಬಿಟ್ಟಿರುವ ಮಾಹಿತಿ ದೊರಕಿದೆ‌. ಇಬ್ಬರೂ ಉತ್ತರಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ತಿಳಿದು ಬಂದಿದೆ‌. ರೈಲು ಮಹಾರಾಷ್ಟ್ರದ ಸತಾರ ದಾಟಿ ಮುಂದೆ ಹೋಗುತ್ತಿತ್ತು. ತಕ್ಷಣ ಪುಣೆ ಪೊಲೀಸರಿಗೆ ಮಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಅದರಂತೆ ಆರೋಪಿಗಳ ಚಹರೆ ಹಾಗೂ ಧರಿಸಿರುವ ಬಟ್ಟೆಗಳ ಆಧಾರದಲ್ಲಿ ಪೊಲೀಸರು ವಶಪಡೆದಿದ್ದರು. ಬಳಿಕ ಕಂಕನಾಡಿ ಪೊಲೀಸರು ಪುಣೆಗೆ ಹೋಗಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ. ಅವರಿಬ್ಬರನ್ನು ವಿಚಾರಣೆ ನಡೆಸಿದಾಗ ತಾವು ಕಳವುಗೈದಿರುವುದು ಒಪ್ಪಿದ್ದಾರೆ. ಅಲ್ಲದೆ ಅವರು ರೈಲ್ವೇ ಪ್ಲ್ಯಾಟ್‌ಫಾರಂನ ಮತ್ತೊಂದೆಡೆ ಹಣದ ಬ್ಯಾಗ್ ಬಚ್ಚಿಟ್ಟಿದ್ದರು‌‌. ಆ ಬ್ಯಾಗ್‌ನಲ್ಲಿದ್ದ 10.13 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Post Views: 321

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.