Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ದಕ್ಷ ಅಧಿಕಾರಿ ರಶ್ಮಿ ದಿಢೀರ್ ವರ್ಗಾವಣೆ ಹಿಂದೆ ಮಾಜಿ ಶಾಸಕನ ಕೈವಾಡ
    ಇತ್ತೀಚಿನ ಸುದ್ದಿ

    ಉಡುಪಿ: ದಕ್ಷ ಅಧಿಕಾರಿ ರಶ್ಮಿ ದಿಢೀರ್ ವರ್ಗಾವಣೆ ಹಿಂದೆ ಮಾಜಿ ಶಾಸಕನ ಕೈವಾಡ

    July 27, 2024
    Share

    ಉಡುಪಿ: ದಕ್ಷ ಅಧಿಕಾರಿಯಾಗಿರುವ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರಿಗೆ ದಿಢೀರ್ ವರ್ಗಾವಣೆ ಶಿಕ್ಷೆ ಎದುರಾಗಿದೆ. ಈ ವರ್ಗಾವಣೆ ಶಿಕ್ಷೆಯ ಹಿಂದೆ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕರ ಒತ್ತಡ ಇದೆ ಎಂಬ ಆರೋಪ‌ ಕೇಳಿಬರುತ್ತಿದೆ.

    ಹೌದು, ಮಾಜಿ ಶಾಸಕನ ಆಪ್ತನ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ಅವರಿಗೆ ಸಹಕರಿಸದಿದ್ದಕ್ಕೆ ರಶ್ಮಿ ಅವರಿಗೆ ಈ ವರ್ಗಾವಣೆ ಶಿಕ್ಷೆಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಮಾಜಿ ಶಾಸಕನ ಆಪ್ತನ ಜಾಗದ ತಕರಾರನ್ನು ವಿಲೇವಾರಿ ಮಾಡುವಂತೆ ಕಾನೂನು ಮೀರಿ ರಶ್ಮಿ ಅವರಿಗೆ ಒತ್ತಡ ಹೇರಲಾಗಿತ್ತು. ಇದಕ್ಕೆ ಒಪ್ಪದ ಸಹಾಯಕ ಆಯುಕ್ತೆ ರಶ್ಮಿ ಕಾನೂನು ವ್ಯಾಪ್ತಿಯಲ್ಲೇ ಕೆಲಸ ಮಾಡಿಕೊಡುವುದಾಗಿ ಹೇಳಿದ್ದರು. ಇದರಿಂದಾಗಿ ಮಾಜಿಶಾಸಕ ರಿಗೆ ಭಾರೀ ಹಿನ್ನೆಡೆಯಾಗಿತ್ತು.

    ಜೊತೆಗೆ ರಶ್ಮಿ ಅವರ ದಿಟ್ಟ ನಿರ್ಧಾರ ಮತ್ತು ದಕ್ಷತೆಗೆ ಕುಂದಾಪುರದ ಜನತೆ ಶಹಭ್ಬಾಸ್ ಎಂದು ಹಾಡಿ ಹೊಗಳಿದ್ದರು. ಅಧಿಕಾರಿ ಎಂದರೆ ಪ್ರಾಮಾಣಿಕವಾಗಿ ರಶ್ಮಿ ಅವರಂತೆ ಇರಬೇಕು ಎಂದು ಸಾರ್ವಜನಿಕರಿಂದಲೂ ಉತ್ತಮ ಪ್ರಶಂಸೆ ಬಂದಿತ್ತು. ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಇರುವ ಕಾನೂನು ಇಲ್ಲ ಎಂಬ ದಿಟ್ಟತನವನ್ನು ನೇರವಾಗಿ ಮಾಜಿ ಶಾಸಕರಿಗೆ ತೋರಿಸಿಕೊಟ್ಟಿದ್ದರು. ಇದಾದ ಕೆಲವೇ ದಿನಕ್ಕೆ ರಶ್ಮಿ ಅವರನ್ನು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವರ್ಗಾವಣೆಗೊಳಿಸಿದ್ದಾರೆ. ತನ್ನ ಉತ್ತಮ ಸೇವೆ ಮೂಲಕ ಹೆಸರು ಪಡೆದಿದ್ದ ರಶ್ಮಿ ಎಸ್.ಆರ್. ಅವರ ದಿಢೀರ್ ವರ್ಗಾವಣೆಗೆ ಇದೀಗ ಕುಂದಾಪುರ ಜನತೆ ಆಕ್ರೋಶಗೊಂಡಿದ್ದಾರೆ.

    Post Views: 249

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.