Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಯನಾಡು ದುರಂತದಿಂದ ಅನಾಥರಾದ ಯುವತಿಯರಿಗೆ ಹೊಸ ಬದುಕು ನೀಡಲು ಮುಂದೆ ಬಂದ ಯುವಕರು!
    ಇತ್ತೀಚಿನ ಸುದ್ದಿ

    ವಯನಾಡು ದುರಂತದಿಂದ ಅನಾಥರಾದ ಯುವತಿಯರಿಗೆ ಹೊಸ ಬದುಕು ನೀಡಲು ಮುಂದೆ ಬಂದ ಯುವಕರು!

    August 8, 2024
    Share

    ಮನ್ನಾರ್​: ಪ್ರಕೃತಿಯ ವಿಕೋಪಕ್ಕೆ ನಲುಗಿ ಸರ್ವಸ್ವವನ್ನೂ ಕಳೆದುಕೊಂಡ ಕೇರಳದ ವಯನಾಡಿಗೆ ದೇಶದ ನಾನಾ ಕಡೆಯಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. ಭೂಕುಸಿತ ದುರಂತ ಪೀಡಿತ ಕುಟುಂಬದ ಹೆಣ್ಣುಮಕ್ಕಳಿಗೆ ಬದುಕು ಕಟ್ಟಿಕೊಳ್ಳಲು ಇದೀಗ ಇಬ್ಬರು ಯುವಕರು ಮುಂದೆ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಬೂದನೂರು ತಯ್ಯೂರು ಮೂಲದ ವಿಷ್ಣುಕುಮಾರ್ (30) ಮತ್ತು ಮಾವೇಲಿಕ್ಕರ ಮೂಲದ ದೀಪುರಾಜ್ (31) ಹೆಸರಿನ ಇಬ್ಬರು ಯುವಕರು ಆಪತ್ಕಾಲದಲ್ಲಿ ತಮ್ಮ ಕುಟುಂಬವನ್ನೇ ಕಳೆದುಕೊಂಡು ಅನಾಥರಾದ ಯುವತಿಯರಿಬ್ಬರಿಗೆ ಮದುವೆ ಎಂಬ ಬಂಧನ ಮೂಲಕ ಉಜ್ವಲ ಬದುಕು ಕಟ್ಟಿಕೊಡಲು ಮುಂದಾಗಿದ್ದಾರೆ.

    ಮಧ್ಯಪ್ರದೇಶದಲ್ಲಿ ಕಂಪನಿಯ ಕೆಲಸ ಬಿಟ್ಟಾಗ ಸಿಕ್ಕ ಹಣದಲ್ಲಿ ಅಕ್ಕನ ಮನೆಯ ಸಮೀಪವೇ ಮನೆ ಕಟ್ಟಲು ಆರಂಭಿಸಿದ ವಿಷ್ಣು, ಈಗ ಮನ್ನಾರ್​ನ ಇರಮತ್ತೂರು ಮುಂದುವೆಲ್​ನಲ್ಲಿ ನೆಲೆಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಿಂದ ಮನನೊಂದ ತಾಯಿಯ ಕೋರಿಕೆಯಂತೆ ವಿಷ್ಣು ಈ ನಿರ್ಧಾರಕ್ಕೆ ಬಂದಿದ್ದಾರೆ. ಡ್ರೈವಿಂಗ್ ಗೊತ್ತಿರುವುದರಿಂದ ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿರುವ ವಿಷ್ಣು, ವಯನಾಡಿನ ಸೂಕ್ತ ಯುವತಿಯೊಬ್ಬಳನ್ನು ಜೀವನ ಸಂಗಾತಿಯಾಗಿ ಪಡೆಯಲಿದ್ದಾರೆ.

    ಮಿಮಿಕ್ರಿ, ಜಾನಪದ ಗೀತೆಗಳಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತು ಪಡಿಸಿರುವ ದೀಪುರಾಜ್, ಖಾಸಗಿ ಬಸ್​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕುಟ್ಟನಾಡ್ ನಡನ್ ಪಟ್ ಕಲಾ ಸಮಿತಿಯೊಂದಿಗೆ ಕಾರ್ಯಕ್ರಮಗಳನ್ನು ನೀಡುತ್ತಿದ್ದ ಈ ಯುವಕ ಚೆಟ್ಟಿಕುಲಂಗರದಲ್ಲಿ ನಿವೇಶನ ಖರೀದಿಸಿ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮದುವೆ ಬಯಕೆಯನ್ನು ಹಂಚಿಕೊಂಡ ನಂತರ ವಯನಾಡಿನಿಂದ ದೀಪು ಅವರನ್ನು ಅರಸಿ ಹಲವು ಫೋನ್ ಕರೆಗಳು ಬರುತ್ತಿವೆ. ಶನಿವಾರ ಸಂಜೆ ದೀಪುರಾಜ್ ವಯನಾಡಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಈ ವೇಳೆ ದೀಪುವಿನ ಸಹೋದರಿಯರು ಸೋನಿ ಮತ್ತು ಕಿಂಗಿಣಿ ಕೂಡ ಸಾಥ್​ ನೀಡಲಿದ್ದಾರೆ.

    ಇದೇ ರೀತಿ ಸಾಕಷ್ಟು ಯುವಕರು ಅನಾಥರಾದ ಹೆಣ್ಣು ಮಕ್ಕಳಿಗೆ ಜೀವನ ಕೊಡಲು ಮುಂದೆ ಬರುತ್ತಿದ್ದಾರೆಂದು ತಿಳಿದುಬಂದಿದೆ. ಈ ಮಹಾ ದುರಂತದಿಂದ ತತ್ತರಿಸಿರುವ ವಯನಾಡಿಗೆ ಅನೇಕ ಸೆಲೆಬ್ರಿಟಿಗಳು ನೆರವಿನ ಹಸ್ತವನ್ನು ಚಾಚಿದ್ದಾರೆ.

    Post Views: 287

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.