Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: 8 ಜನರನ್ನು ಮದುವೆಯಾಗಿ ವಂಚನೆ..! ಹಣಹೊಂದಿರುವ ಗಂಡಸರೇ ಈಕೆಯ ಟಾರ್ಗೆಟ್
    ಇತ್ತೀಚಿನ ಸುದ್ದಿ

    ಉಡುಪಿ: 8 ಜನರನ್ನು ಮದುವೆಯಾಗಿ ವಂಚನೆ..! ಹಣಹೊಂದಿರುವ ಗಂಡಸರೇ ಈಕೆಯ ಟಾರ್ಗೆಟ್

    August 31, 2024
    Share

    ಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿ ಕೋಟಿ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ.

    ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೂ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಹಣಹೊಂದಿರುವ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು.

    ಹೀನಾ ಎಂಟರ್‍ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಕೊಡಿಸುತ್ತೇನೆ ಎಂದು ಕಚೇರಿ ಮಾಡಿಕೊಂಡಿದ್ದಳು. 18 ವರ್ಷದಿಂದ ಇದನ್ನೇ ಬ್ಯುಸಿನೆಸ್ ಮಾಡಿಕೊಂಡಿದ್ದಳು. ಅಲ್ಲದೇ ಯು.ಟಿ. ಖಾದರ್ ಬಳಿ ಬ್ಲ್ಯಾಕ್ ಮನಿ ಇದೆ. ಅದನ್ನ ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಜನರನ್ನು ನಂಬಿಸಿದ್ದಳು.

    1 ಕೋಟಿ ರೂ. ಲೋನ್ ಬೇಕಾದರೆ 15 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದಳು. 10 ದಿನದಲ್ಲಿ ಲೋನ್ ಕೊಡಲಾಗುತ್ತೆ ಎಂದು ಭರವಸೆ ನೀಡಿ ವಂಚನೆ ಮಾಡುತ್ತಿದ್ದಳು.

    ರಾಜ್ಯದಾದ್ಯಂತ 38 ಕೋಟಿ ರೂ.ಗೂ ಅಧಿಕ ಹಣವನ್ನು ಸಾವಿರಾರು ಜನರಿಗೆ ಮೋಸ ಮಾಡಿದ್ದಾಳೆ ಎಂಬುದು ತಿಳಿದು ಬಂದಿದೆ. ಕ್ರಿಮಿನಲ್ ಲಾಯರ್ ಮೂಲಕ ದುಡ್ಡು ವಾಪಸ್ ಕೇಳುವವರಿಗೆ ಕೇಸ್ ದಾಖಲಿಸುವ ಭಯ ಹುಟ್ಟಿಸುತ್ತಿದ್ದಳು.

    ಅಲ್ಲದೇ ಚೆಕ್ ಬರೆಸಿಕೊಂಡು ಚೆಕ್ ಬೌನ್ಸ್ ಕೇಸ್ ದಾಖಲಿಸುವ ಬೆದರಿಕೆಯನ್ನು ಹಾಕಿದ್ದಳು ಎಂದು ತಿಳಿದು ಬಂದಿದೆ. ಈಕೆಯ ವಂಚನೆಯ ವಿಚಾರ ತಿಳಿದ ಮೇಲೆ 6ನೇ ಗಂಡ ರಾಜಾಹುಸೇನ್ ಮಹಿಳೆಯನ್ನು ಪ್ರಶ್ನಿಸಿದ್ದು, ಆತನ ಮೇಲೂ ಕೇಸ್ ದಾಖಲಿಸುವ ಬೆದರಿಕೆ ಹಾಕಿದ್ದಳು ಎಂದು ತಿಳಿದು ಬಂದಿದೆ. ಈಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Post Views: 366

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.