Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ಯಾಂಕ್ ಗ್ರಾಹಕರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಎಚ್ಚರಿಕೆ: ಹೀಗೆ ಮಾಡಿದ್ರೇ ಕೇಸ್ ಫಿಕ್ಸ್
    ಇತ್ತೀಚಿನ ಸುದ್ದಿ

    ಬ್ಯಾಂಕ್ ಗ್ರಾಹಕರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಎಚ್ಚರಿಕೆ: ಹೀಗೆ ಮಾಡಿದ್ರೇ ಕೇಸ್ ಫಿಕ್ಸ್

    September 1, 2024
    Share

    ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ.

    ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

    ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬ್ಯಾಂಕ್ ಖಾತೆಗಳನ್ನು “ಡ್ಯೂಲ್” ಅಕೌಂಟ್‌ಗಳೆಂದು ಪರಿಗಣಿಸಿ ಖಾತೆದಾರರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಭಾವಿಸಿ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರದ “ಪೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್” ರವರು ಆದೇಶಿಸಿರುತ್ತಾರೆ ಎಂದಿದ್ದಾರೆ.

    ಕೆಲವರು ಅಲ್ಪ ಹಣದ ಆಸೆಯಿಂದ ಅಥವಾ ಅತಿಯಾದ ನಂಬಿಕೆಯಿಂದ ಅಥವಾ ತಿಳುವಳಿಕೆ ಕೊರತೆಯಿಂದ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮದಲ್ಲದ ಮೊಬೈಲ್ ನಂಬರ್‌ಗಳನ್ನು ಲಿಂಕ್ ಮಾಡಿಸಿ, ಅಪರಿಚಿತ ವ್ಯಕ್ತಿಗಳಿಗೆ ಬಳಸಿಕೊಳ್ಳಲು ಅನುಮತಿ ನೀಡುತ್ತಿದ್ದಾರೆ. ಇಂತಹ ಖಾತೆಗಳನ್ನು ವಂಚಕರು ಸೈಬರ್ ಅಪರಾಧಗಳನ್ನು ಎಸಗಲು ಬಳಸಿಕೊಳ್ಳುತ್ತಿದ್ದು, ಇದರಿಂದ ಯಾರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗಿದೆಯೋ ಅಂತಹ ವ್ಯಕ್ತಿಗಳು ಸಹ ಸಮಸ್ಯೆಗೆ ಸಿಲುಕಿ ಕಠಿಣ ಕಾನೂನು ಕ್ರಮ ಎದುರಿಸಬೇಕಾದ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ್ದಾರೆ.

    ಆದ್ದರಿಂದ ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಬಳಸಿಕೊಳ್ಳಲು ನೀಡುವುದಾಗಲಿ, ಅನ್ಯ ವ್ಯಕ್ತಿಗಳ ಮೊಬೈಲ್‌ ನಂಬರ್‌ಗಳನ್ನು ಲಿಂಕ್ ಮಾಡಿಸುವುದಾಗಲೀ, ಬ್ಯಾಂಕ್ ವಿವರಗಳನ್ನು ನೀಡಿ ಅಪರಿಚಿತರಿಂದ ಹಣವನ್ನು ಹಾಕಿಸಿಕೊಂಡು ನಗದಾಗಿ ಪರಿವರ್ತಿಸಿ ನೀಡುವುದಾಗಲೀ, ಓ.ಟಿ.ಪಿ ಹಾಗೂ ಇನ್ನಿತರೆ ಬ್ಯಾಂಕ್ ಮಾಹಿತಿಯನ್ನು ನೀಡಿ ಖಾತೆ ಬಳಕೆಗೆ ಅನುಮತಿ ನೀಡುವುದಾಗಲೀ ಮಾಡದೇ ಜಾಗೃತಿ ವಹಿಸಿ ಎಂದು ಹೇಳಿದ್ದಾರೆ.

    ಈ ರೀತಿಯ ಖಾತೆ ಮಾಡಿಸುವ ಏಜೆಂಟ್‌ರು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೋರಿದ್ದಾರೆ.

    Post Views: 333

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.