Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ನಿವೃತ್ತ ಮುಖ್ಯ ಶಿಕ್ಷಕ ಕೊಲೆ ಪ್ರಕರಣ – ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ನಿವೃತ್ತ ಮುಖ್ಯ ಶಿಕ್ಷಕ ಕೊಲೆ ಪ್ರಕರಣ – ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

    September 2, 2024
    Share

    ಬೆಳ್ತಂಗಡಿ ಸಮೀಪ ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್‌ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆ. 31ರ ವರೆಗೆ ಪೊಲೀಸ್‌ ವಶಕ್ಕೆ ಒಪ್ಪಿಸಿತ್ತು. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಯಲಾಗಿದೆ.

    ಬೆಳಾಲು ನಿವಾಸಿ ಬಾಲಕೃಷ್ಣ ಭಟ್‌ ಅವರನ್ನು ಆ. 20ರಂದು ಅವರ ಮನೆಯಲ್ಲಿ ಕೊಲೆ ಮಾಡಿರುವ ಆರೋಪದಲ್ಲಿ ಆ. 24ರಂದು ಧರ್ಮಸ್ಥಳ ಠಾಣೆ ಪೊಲೀಸರು ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54) ಮತ್ತು ಆತನ ಪುತ್ರ ಮುರಳಿಕೃಷ್ಣ(21)ನನ್ನು ಆ. 27ರಂದು ಬಂಧಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಆ. 31ರ ವರೆಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದರು.

    ಅದರಂತೆ ಪೊಲೀಸರು ಸ್ಥಳ ಮಹಜರು ಮಾಡಿದ ಬಳಿಕ ಆರೋಪಿಗಳ ಕಾಸರಗೋಡಿನ ಕುಂಬ್ಡಾಜೆಯ ವಡಂಬಳೆಯ ಮನೆಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಅದರಲ್ಲಿ ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್‌, ಬಟ್ಟೆ, ಕತ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಮಂಗಳೂರು ಸಬ್‌ಜೈಲ್‌ಗೆ ಕರೆದೊಯ್ಯಲಾಗಿದೆ.

    ಇಬ್ಬರು ಆರೋಪಿಗಳ ಕುರಿತು ಕಾಸರಗೋಡಿನ ಮನೆಯ ಸುತ್ತಮುತ್ತ ಉತ್ತಮ ಅಭಿಪ್ರಾಯವಿರಲಿಲ್ಲ. ಕೊಲೆ ಮಾಡಿದ ಬಳಿಕವೂ ಯಾವುದೇ ಅನುಮಾನ ಬಾರದಂತೆ ಇದ್ದರು. ಪೊಲೀಸರ ತೀವ್ರ ಸ್ವರೂಪದ ಕಾರ್ಯಕ್ಷಮತೆಯಿಂದ ತಂದೆ, ಮಗ ಇಬ್ಬರೂ ಕಂಬಿ ಎಣಿಸುವಂತಾಗಿದ್ದಾರೆ. ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.

    Post Views: 164

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.