Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ : ಶಾಂತಿ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತರು
    ಇತ್ತೀಚಿನ ಸುದ್ದಿ

    ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ : ಶಾಂತಿ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತರು

    September 3, 2024
    Share

    ಮಂಗಳೂರು: ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ ನಗರದಲ್ಲಿ ಶಾಂತಿ  ಕಾಪಾಡಬೇಕು ಮತ್ತು ಎಲ್ಲಾ ಧರ್ಮದ ಮುಖಂಡರು ಇದಕ್ಕೆ ಸಹಕರಿಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

    ತನ್ನ  ಕಚೇರಿಯಲ್ಲಿ ಸೋಮವಾರ ಶಾಂತಿ ಸಭೆ ನಡೆಸಿ ಧಾರ್ಮಿಕ ಮತ್ತು ಸಮಾಜದ ಮುಖಂಡರಿಗೆ ಕೆಲವೊಂದು ಸೂಚನೆಗಳನ್ನು ಆಯುಕ್ತರು ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ, 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಗಳಿವೆ. ಅದಲ್ಲದೆ ಸೆ.15/16ರಂದು ಮೀಲಾದುನ್ನಬಿ ಆಚರಣೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ, 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಗಳಿವೆ. ಅದಲ್ಲದೆ ಸೆ.15/16ರಂದು ಮೀಲಾದುನ್ನಬಿ ಆಚರಣೆ ನಡೆಯಲಿದೆ. ಹಾಗಾಗಿ ಎಲ್ಲಾ ಧರ್ಮದ ಹಿರಿಯ ಮುಖಂಡರು ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

    1. ಪ್ರತಿಷ್ಠಾಪನೆಯ ಮೊದಲು ಮೆಸ್ಕಾಂ, ಅಗ್ನಿಶಾಮಕ ನಿಗಮ/ಸ್ಥಳೀಯ ಸಂಸ್ಥೆಗಳಿಂದ ಅನುಮತಿಗಳನ್ನು ಪಡೆದು ಕೊಳ್ಳ ಬೇಕು. ಗಣಪತಿ ವಿಗ್ರಹ ಪ್ರತಿಷ್ಠಾನೆಯ ಸ್ಥಳದ ಮಾಲಕರ ಅನುಮತಿ ಪಡೆದುಕೊಳ್ಳಬೇಕು. ಗಣೇಶ ಪೆಂಡಾಲುಗಳನ್ನು ಸುರಕ್ಷಿತವಾಗಿ ಹಾಕಲು ವ್ಯವಸ್ಥೆ ಮಾಡಬೇಕು. ಈ ಪೆಂಡಾಲ್ ಮಳೆ, ಗಾಳಿ, ಬೆಂಕಿಗಳಿಂದ ಸುರಕ್ಷಿತವಾಗಿರುವಂತೆ ನಿಗಾವಹಿಸಲು ಸೂಚಿಸಲಾಗಿದೆ.

    2. ಗಣೇಶ ಮಂಟಪದೊಳಗೆ ದೀಪ ಇಡುವ ಸ್ಥಳದ ಬಳಿ ಬೆಂಕಿಯನ್ನು ಸ್ಪರ್ಶಿಸುವಂತಹ ವಸ್ತುಗಳನ್ನು ಇಡಬಾರದು, ಬೆಂಕಿ ಆಕಸ್ಮಿಕದಿಂದ ಅವಘಡ ತಡೆಗಟ್ಟುವ ಸಲುವಾಗಿ ಅಗ್ನಿನಂದಕ ಸಲಕರಣೆಗಳಾದ ಮರಳು ಮತ್ತು ನೀರು ತುಂಬಿದ ಬಕೆಟ್‌ ಗಳು, ಅಗ್ನಿಶಮನ ಉಪಕರಣ ಇಟ್ಟುಕೊಳ್ಳಬೇಕು.

    3. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮದ ವೇದಿಕೆಗಳಲ್ಲಿ ಪಾಲ್ಗೊಳ್ಳುವವರ ಪ್ರಮುಖರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯ ವಿವರವಾದ ಪಟ್ಟಿಯನ್ನು ಮುಂಚಿತವಾಗಿ ಪೊಲೀಸ್ ಠಾಣೆಗೆ ನೀಡಬೇಕು. ಕಾರ್ಯಕ್ರಮಕ್ಕೆ ಸಂಬಂಧಿಸಿ ಸಾರ್ವಜನಿಕ ಸ್ಥಳದಲ್ಲಿ ಡಿಸ್ಪ್ಲೆ ಮತ್ತು ಬ್ಯಾನರ್‌ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಸ್ಥಳೀಯ ಕಡ್ಡಾಯವಾಗಿ ಅನುಮತಿಯನ್ನು ಪಡೆದುಕೊಳ್ಳಬೇಕು.

    4. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಳವಡಿಸುವ ಫ್ಲೆಕ್ಸ್, ಬ್ಯಾನರ್‌ಗಳಲ್ಲಿ ಯಾವುದೇ ಪ್ರಚೋದನಾತ್ಮಕ ವಿಷಯ ಬಳಸಬಾರದು. ಯಾವುದೇ ಧರ್ಮ/ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವಂತಹ ಟ್ಯಾಬ್ಲೊ, ನತ್ಯರೂಪಕ ಇರಬಾರದು.

    ಆಸ್ಪತ್ರೆಗಳ ಬಳಿ, ಜನ ಸಂದಣಿಯ ಮಧ್ಯೆ ಸುಡುಮದ್ದುಗಳನ್ನು ಬಳಸಬಾರದು. ರಾತ್ರಿ 10 ಗಂಟೆಯ ನಂತರ ಸುಡುಮದ್ದು / ಪಟಾಕಿಗಳನ್ನು ಬಳಸುವಂತಿಲ್ಲ.

    5. ಕಟೌಟ್‌ಗಳನ್ನು ಅಳವಡಿಸುವ ಸ್ಥಳಗಳು ಯಾವುದೇ ಸಂಚಾರ ದಟ್ಟಣೆ ಅಥವಾ ಸಾರ್ವಜನಿಕ ತೊಂದರೆಗೆ ಕಾರಣವಾಗ ದಂತೆ ನೋಡಿಕೊಳ್ಳಬೇಕು. ಗಣೇಶ ವಿಸರ್ಜನೆಯ ದಿನಾಂಕ, ವೇಳೆ, ಮಾರ್ಗ ಮುಂತಾದ ವಿವರಗಳನ್ನು ಮುಂಚಿತವಾಗಿ ಸಂಬಂಧಿಸಿದ ಪೊಲೀಸ್ ನಿರೀಕ್ಷಕರು ಮತ್ತು ಎಸಿಪಿಯವವರಿಗೆ ನೀಡಿ ಮಂಜೂರಾತಿ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದ ಅಂತಿಮಗೊಳಿಸಲಾದ ಮಾರ್ಗದಲ್ಲಿ ಮಾತ್ರ ಮೆರವಣಿಗೆ ಸಾಗಬೇಕು. ವಿಸರ್ಜನಾ ಮೆರವಣಿಗೆ ಸಮಯ ದಲ್ಲಿ ಇತರ ಧರ್ಮಗಳ ವಿರುದ್ಧ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಬಾರದು.

    6. ಕಾರ್ಯಕ್ರಮ ಸ್ಥಳಗಳಲ್ಲಿ ಆಯೋಜಕರು ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡಬೇಕು. ಸೂಕ್ತ ಪಾಕಿಂಗ್ ವ್ಯವಸ್ಥೆಗೆ ಆಯಾ ಸಂಘ-ಸಂಸ್ಥೆಗಳ ವತಿಯಿಂದ ಸ್ವಯಂ ಸೇವಕರನ್ನು ನೇಮಿಸಿ ಕಾರ್ಯಕ್ರಮ ಸ್ಥಳಗಳಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡೆ ತಡೆ ಉಂಟಾಗದಂತೆ ನೋಡಿಕೊಳ್ಳಬೇಕು.

    7. ಆಯೋಜಕರು ತುರ್ತು ಸಂದರ್ಭದಲ್ಲಿ ಬಳಸಲು ಅನುಕೂಲವಾಗುವಂತೆ ಮೆರವಣಿಗೆಯಲ್ಲಿ ಒಂದು ಸುಸಜ್ಜಿತ ಆ್ಯಂಬುಲೆನ್ಸ್ ವ್ಯವಸ್ಥೆಗೊಳಿಸಬೇಕು.ಪಿಟ್‌ನೆಸ್ ಸರ್ಟಿಫಿಕೇಟ್,ಇನ್ಸುರೆನ್ಸ್ ಸರ್ಟಿಫಿಕೇಟ್ ಇರುವ ವಾಹನಗಳಲ್ಲಿ ಮಾತ್ರ ಸ್ಥಬ್ದಚಿತ್ರ ಅಳವಡಿಸಬೇಕು.

    8. ಕಾರ್ಯಕ್ರಮ/ಮೆರವಣಿಗೆಯ ವೇಳೆ ಸ್ವಯಂ ಸೇವಕರಿಗೆ ಒಂದೇ ರೀತಿಯ ಬಣ್ಣದ ಉಡುಪುಗಳನ್ನು ನೀಡಬೇಕು. ಸ್ವಯಂ ಸೇವಕರನ್ನು ಗುಂಪುಗಳನ್ನಾಗಿ ವಿಂಗಡಿಸಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ನಿಯೋಜಿಸಿ ಮೆರವಣಿಗೆ ಸುಲಲಿತವಾಗಿ ಸಾಗುವಂತೆ ಮಾಡಬೇಕು.

    9.ಕಾರ್ಯಕ್ರಮಕ್ಕೆ ಬರುವ ಜನರ ವಾಹನ ಪಾರ್ಕಿಂಗ್‌ಗೆ ಸ್ಥಳ ಗುರುತಿಸಬೇಕು, ಮೆರವಣಿಗೆ ಹಾದು ಹೋಗುವ ರಸ್ತೆಯಲ್ಲಿ ವಾಹನಗಳ ನಿಲುಗಡೆಯಾಗದಂತೆ ಸ್ವಯಂ ಸೇವಕರನ್ನು ನಿಯೋಜಿಸಬೇಕು. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಬಂದೋಬಸ್ತ್ ಕರ್ತವ್ಯದಲ್ಲಿ ಇರುವ ಪೊಲೀಸ್ ಅಧಿಕಾರಿಗಳ ಸೂಚನೆಗಳನ್ನು ಪಾಲಿಸಬೇಕು ಮತ್ತು ಪೊಲೀಸರೊಂದಿಗೆ ಸಹಕರಿಸಬೇಕು.

    ಧ್ವನಿವರ್ಧಕ ಅಳವಡಿಸುವವರಿಗೆ ಸೂಚನೆಗಳು

    *ಸ್ಥಬ್ಧಚಿತ್ರಗಳಲ್ಲಿ/ಕಾರ್ಯಕ್ರಮ ಸ್ಥಳಗಳಲ್ಲಿ ಧ್ವನಿವರ್ಧಕವನ್ನು ಅಳವಡಿಸುವ ಮೊದಲು ಪೊಲೀಸ್ ಇಲಾಖೆಯಿಂದ ಅನು ಮತಿ ಪಡೆದುಕೊಳ್ಳಬೇಕು. ಇಲಾಖೆಯಿಂದ ನೀಡಲಾದ ಪರವಾನಿಗೆಯಲ್ಲಿ ನಿಗದಿಪಡಿಸಿದ ಸಮಯದವರೆಗೆ ಮಾತ್ರ ಧ್ವನಿವರ್ಧಕವನ್ನು ಬಳಸಬೇಕು. ಡಿ.ಜೆ ಬಳಸಲು ಅವಕಾಶ ಇರುವುದಿಲ್ಲ. ಆಸ್ಪತ್ರೆ, ಶೀಕ್ಷಣ ಸಂಸ್ಥೆಗಳ ಬಳಿ ಧ್ವನಿವರ್ಧಕ ಅಳವಡಿಸಬಾರದು ಎಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

    Post Views: 232

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.