Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಜೆಬಿಎಫ್ ಕಂಪೆನಿಗೆ ಭೂಮಿ ನೀಡಿದವರಿಗೆ ಜಿಎಂಪಿಎಲ್ ನಲ್ಲಿ ಉದ್ಯೋಗ
    Uncategorized

    ಜೆಬಿಎಫ್ ಕಂಪೆನಿಗೆ ಭೂಮಿ ನೀಡಿದವರಿಗೆ ಜಿಎಂಪಿಎಲ್ ನಲ್ಲಿ ಉದ್ಯೋಗ

    September 18, 2024
    Share

    ಮಂಗಳೂರು: ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ.

    ಇದರೊಂದಿಗೆ ಬಹುದಿನಗಳಿಂದ ಬಾಕಿಯಾಗಿದ್ದ ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಈ ಗಂಭೀರ ಸಮಸ್ಯೆಯನ್ನು ದ.ಕ. ಸಂಸದ ಬ್ರಿಜೇಶ್ ಚೌಟ ಅವರು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಸಂಬಂಧ ಬ್ರಿಜೇಶ್ ಚೌಟ ಅವರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಗೈಲ್ ಇಂಡಿಯಾದ ನಿರ್ದೇಶಕ ಹಾಗೂ ಜಿಎಂಪಿಎಲ್ ಅಧ್ಯಕ್ಷ ಆಯುಶ್ ಗುಪ್ತಾ ಅವರು, ‘‘ಜಿಎಂಪಿಎಲ್‌ಗೆ ಜೆಬಿಎಫ್‌ಪಿಎಲ್ ಪಿಡಿಎಫ್ ಸಮಸ್ಯೆ ಬಗ್ಗೆ ಮನವಿ ಬಂದಿದ್ದು ಅದನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುತ್ತಿದ್ದು, ಸೆ.30ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ’’ ಭರವಸೆ ನೀಡಿದ್ದಾರೆ.

    ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಕಠಿಣ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ‘‘ಜಿಎಂಪಿಎಲ್ ಅಧ್ಯಕ್ಷರಿಂದ ಪತ್ರ ಬಂದಿರುವುದು ನಿಜಕ್ಕೂ ಬಹಳ ಸಂತೋಷವುಂಟು ಮಾಡಿದ್ದು, ಮಂಗಳೂರು ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್)ದ ಜೆಬಿಎಫ್ ಜಿಡಿಎಫ್ ಉದ್ಯೋಗಿಗಳ ಈ ಗಂಭೀರ ಸಮಸ್ಯೆಗೆ ಸ್ಪಂದಿಸಿ ಜಿಎಂಪಿಎಲ್ ಮೂಲಕ ಅದನ್ನು ಬಗೆಹರಿಸುತ್ತಿರುವುದಾಗಿ ಪತ್ರ ಬಂದಿದೆ’’ ಎಂದಿದ್ದಾರೆ.

    ‘‘ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವಂತೆ ಕಳೆದ ತಿಂಗಳು ನಾನು ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಸಚಿವರು, ನಮ್ಮ ಮನವಿಗೆ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್, ಗೈಲ್ ಸಿಎಂಡಿ ಸಂದೀಪ್ ಗುಪ್ತಾ ಹಾಗೂ ಜಿಎಂಪಿಎಲ್ ಅಧ್ಯಕ್ಷ ಆಯುಶ್ ಗುಪ್ತಾ ಅವರೊಂದಿಗೆ ಸಭೆ ನಡೆಸಿದ್ದರು. ಹೀಗಾಗಿ, ಸಚಿವರು ಹಾಗೂ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ’’ ಎಂದು ಚೌಟ ತಿಳಿಸಿದ್ದಾರೆ.

    ಜೆಬಿಎಫ್ ಪಿಡಿಎಫ್ ಉದ್ಯೋಗಿಗಳ ಸಮಸ್ಯೆ ಹಿನ್ನೆಲೆ

    ಗೈಲ್ ಇಂಡಿಯಾವು ಜೆಬಿಎಫ್ ಪೆಟ್ರೋಕೆಮಿಕಲ್ಸ್‌ನ ಪಿಟಿಎ ಸ್ಥಾವರವನ್ನು ಸ್ವಾಧೀನಪಡಿಸಿಕೊಂಡಿದ್ದು, ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಅನ್ನು ಸ್ಥಾಪಿಸಿತ್ತು. ಆದರೆ, ಮೂಲ ಗುತ್ತಿಗೆಯ ಭಾಗವಾಗಿ, ಜೆಬಿಎಫ್ ಪೆಟ್ರೋ ಕೆಮಿಕಲ್ಸ್‌ನ 115 ಸ್ಥಳಾಂತರಗೊಂಡ ಕುಟುಂಬಗಳಿಗೆ ಪೂರ್ಣಾವಧಿಯ ಉದ್ಯೋಗದ ಭರವಸೆ ನೀಡಿತ್ತು. ಆದರೆ ಜಿಎಂಪಿಎಲ್ ಪ್ರಾಜೆಕ್ಟ್ ಡಿಸ್ಪ್ಲೇಸ್ಡ್ ಫ್ಯಾಮಿಲೀಸ್ (ಪಿಡಿಎಫ್‌ಎಸ್)ಗೆ ಗುತ್ತಿಗೆ ಆಧಾರಿತ ಉದ್ಯೋಗಗಳನ್ನು ಮಾತ್ರ ನೀಡಲು ಪರಿಗಣಿಸಿತ್ತು. ಇದರಿಂದ ಜೆಬಿಎಫ್‌ನ ಉದ್ಯೋಗಿಗಳು ಅತಂತ್ರ ಸ್ಥಿತಿಯಲ್ಲಿದ್ದರು.

    ಈ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸಂಸದ ಚೌಟ ಅವರು, ತಮ್ಮ ಚೊಚ್ಚಲ ಅಧಿವೇಶನದ ವೇಳೆಯೇ ಅಂದರೆ ಕಳೆದ ಜೂನ್ 26ರಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ದ್ದರು. ಈ ಪತ್ರದಲ್ಲಿ ಚೌಟ ಅವರು, ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾಗ ಜೆಬಿಎಫ್‌ಪಿಎಲ್ ಭೂಮಿ ಕಳೆದು ಕೊಂಡ ವರಿಗೆ ಪೂರ್ಣಾವಧಿ ಉದ್ಯೋಗದ ಭರವಸೆ ನೀಡಿತ್ತು. ಹೀಗಾಗಿ, ಸಚಿವರು ಮಧ್ಯಪ್ರವೇಶಿಸಿ ಪಿಡಿಎಫ್ ಆಧಾರಿತ ಪೂರ್ಣಾ ವಧಿ ಉದ್ಯೋಗವನ್ನು ಜಿಎಂಪಿಎಲ್‌ನಲ್ಲಿ ಒದಗಿಸುವಂತೆ ಮನವಿ ಮಾಡಿದ್ದರು. ಚೌಟ ಅವರ ಈ ಮನವಿ ಬೆನ್ನಲ್ಲೇ ಆ.7ರಂದು ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಮಹತ್ವದ ಸಭೆ ಕೂಡ ನಡೆಸಿ ದ್ದರು. ಆ ಮೂಲಕ ಕೇವಲ 40 ದಿನದೊಳಗೆ ಈ ಗಂಭೀರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಬಗೆಹರಿಸಿದೆ ಎಂದು ಚೌಟ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

    Post Views: 275

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.