Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಯುವಕನ ಮೇಲೆ ಹಲ್ಲೆ, ಕೊಲೆಗೆ ಯತ್ನ.! ಎಲ್ಲಾ 8 ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ: ಯುವಕನ ಮೇಲೆ ಹಲ್ಲೆ, ಕೊಲೆಗೆ ಯತ್ನ.! ಎಲ್ಲಾ 8 ಆರೋಪಿಗಳ ಬಂಧನ

    July 21, 2022
    Share

    ಸುಳ್ಯ: ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಸುಳ್ಯ ತಾಲೂಕಿನ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಜು. 19ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಸ್ಥಳೀಯ ನಿವಾಸಿಗಳಾದ ಸುನೀಲ್, ಸುಧೀರ್, ಶಿವ, ಸದಾಶಿವ, ರಂಜೀತ್ ಅಭಿಲಾಷ್, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರು ಬಂಧಿತ ಆರೋಪಿಗಳು.

    ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18 ವರ್ಷ) ಹಲ್ಲೆಗೊಳಗಾದ ಯುವಕ. ಮೊನ್ನೆ ಸಂಜೆ ಇಲ್ಲಿನ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದು ನಡೆದಿದ್ದು ಅದಕ್ಕೆ ಮಸೂದ್ ಬಂದಿದ್ದ. ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಆರೋಪಿ ಸುದೀರ್ ನಿಂತಿದ್ದು, ಕ್ಷುಲ್ಲಕ ಕಾರಣಕ್ಕೆ ಮಸೂದ್ ಹಾಗೂ ಆರೋಪಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಪರಿಣಾಮ ಎಂಟು ಜನ ಆರೋಪಿಗಳು ಒಟ್ಟು ಸೇರಿ ಏಕಾಏಕಿ ಮಸೂದನಿಗೆ ಕೈಯಿಂದ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ ಎನ್ನಲಾಗಿತ್ತು. ಇವರಲ್ಲಿ ಅಭಿಲಾಶ್ ಎಂಬಾತ ಖಾಲಿ ಬಾಟಲಿಯಿಂದ ಮಸೂದನ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ನಂತರದಲ್ಲಿ ಮಸೂದ್ ನ ಗೆಳೆಯರು ಹುಡುಕಾಟ ನಡೆಸುವಾಗ ತಡ ರಾತ್ರಿ 1.30ರ ವೇಳೆ ಅಲ್ಲಿಯೇ ಅಬೂಬಕ್ಕರ್ ಎಂಬವರ ಬಾವಿಯ ಬಳಿ ಮಸೂದನು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಳಿಕ ಆತನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು , ಅಲ್ಲಿನ ವೈದ್ಯರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಪಡೀಲ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾನೀಫ್ ಎಂಬಾತ ನೀಡಿದ ದೂರಿನಂತೆ ಎಲ್ಲಾ ಆರೋಪಿಗಳ ವಿರುದ್ಧ ಐಪಿಸಿ ಕಲಂ :143, 147, 323, 324, 307 ಜೊತೆಗೆ 149 ರಂತೆ ಪ್ರಕರಣ ದಾಖಲಾಗಿದೆ. ಮಸೂದ್ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

    Post Views: 230

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.