Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೆನ್ಲಾಕ್ ಆಸ್ಪತ್ರೆ ಮುಂಭಾಗ ಗುಳಿಗ ದೈವದ ಸಾನಿಧ್ಯ- ಸ್ವಂತ ಖರ್ಚಿನಲ್ಲಿ ಪ್ರತಿಷ್ಠೆ ಮಾಡಿದ ವೈದ್ಯಾಧಿಕಾರಿಗಳು, ಸಿಬ್ಬಂದಿ
    ಇತ್ತೀಚಿನ ಸುದ್ದಿ

    ವೆನ್ಲಾಕ್ ಆಸ್ಪತ್ರೆ ಮುಂಭಾಗ ಗುಳಿಗ ದೈವದ ಸಾನಿಧ್ಯ- ಸ್ವಂತ ಖರ್ಚಿನಲ್ಲಿ ಪ್ರತಿಷ್ಠೆ ಮಾಡಿದ ವೈದ್ಯಾಧಿಕಾರಿಗಳು, ಸಿಬ್ಬಂದಿ

    September 25, 2024
    Share

    ಮಂಗಳೂರು: ಇತ್ತೀಚೆಗೆ ನಗರದ ಹಂಪನಕಟ್ಟೆಯ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಾಮಗಾರಿ ಶರವು ಗುಳಿಗ ದೈವದ ಆಗ್ರಹಕ್ಕೆ ತುತ್ತಾಗಿ, ಗುತ್ತಿಗೆದಾರನೇ ದೈವಕ್ಕೆ ಶರಣಾಗಿದ್ದ ಸುದ್ದಿ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡಿತ್ತು.

    ಇದೀಗ ಅದೇ ಶರವು ಗುಳಿಗ ದೈವವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿಯೇ ಆರಾಧನೆಗೆ ಒಳಪಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಹಂಪನಕಟ್ಟೆಯ ವೆನ್ಲಾಕ್ ಜಿಲ್ಲಾಸ್ಪತ್ರೆ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಕಟ್ಟಡದ ಮುಂಭಾಗದ ಅಶ್ವತ್ಥಮರದ ಬುಡದಲ್ಲಿ ಗುಳಿಗನನ್ನು ಕಲ್ಲುಹಾಕಿ ಆರಾಧಿಸಲಾಗುತ್ತಿದೆ. ಸುಮಾರು 40ವರ್ಷಗಳ ಹಿಂದೆ ಈ ಜಾಗದಲ್ಲಿ ದಲಿತ ಕುಟುಂಬಗಳು ವಾಸವಾಗಿತ್ತು. ಅವರನ್ನು ಬಳಿಕ ವಾಮಂಜೂರಿಗೆ ಸ್ಥಳಾಂತರಿಸಲಾಗಿತ್ತು. ಆಗ ಅವರು ತಾವು ಆರಾಧಿಸಿಕೊಂಡಿದ್ದ 5ದೈವಗಳನ್ನು ತಮ್ಮೊಂದಿಗೆ ಕೊಂಡೊಯ್ದಿದ್ದರು. 4ದೈವಗಳು ಹೋದರೂ ಜಾಗದದೈವ ಗುಳಿಗ ಮಾತ್ರ ಹೋಗಿರಲಿಲ್ಲ. ಗುಳಿಗ ದೈವದ ಸಾನಿಧ್ಯ ಆಸ್ಪತ್ರೆಯ ಆವರಣದ ಅಶ್ವತ್ಥ ಮರದ ಬುಡದಲ್ಲಿತ್ತು. ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಳಿಗ ದೈವದ ಸಾನಿಧ್ಯವಿದ್ದ ಮರವನ್ನು ಅಲ್ಲಿಯೇ ಸ್ಥಳಾಂತರಿಸಲಾಗಿತ್ತು. ಕಾಮಗಾರಿ ಸಂದರ್ಭ ನಾಗಹತ್ಯೆಯೂ ಆಗಿತ್ತು. ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗೆ ಹಲವು ತೊಂದರೆಗಳು ಕಂಡುಬಂದಿತ್ತು. ಎರಡ್ಮೂರು ಅಸಹಜ ಸಾವು ಸಂಭವಿಸಿತ್ತು. ಸಿಬ್ಬಂದಿಗೆ ವಿಚಿತ್ರ ಅನುಭವಗಳಾಗಿತ್ತು‌. ಆದ್ದರಿಂದ ಪ್ರಶ್ನಾಚಿಂತನೆ ಇಟ್ಟಾಗ ದೈವಸಾನಿಧ್ಯ ಇರುವಿಕೆ ಗೋಚರವಾಗಿತ್ತು. ಅದರಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಅಧಿಕಾರಿಗಳು ಸ್ವಂತ ಖರ್ಚಿನಲ್ಲಿಯೇ ದೈವದ ಪುನರ್ ಪ್ರತಿಷ್ಠೆ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಧನಾತ್ಮಕ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

    Post Views: 297

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.