Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಓವರ್ ಟೇಕ್ ಮಾಡಲು ಹೋಗಿ ಬಸ್ ನಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು..!
    ಇತ್ತೀಚಿನ ಸುದ್ದಿ

    ಮಂಗಳೂರು: ಓವರ್ ಟೇಕ್ ಮಾಡಲು ಹೋಗಿ ಬಸ್ ನಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು..!

    September 28, 2024
    Share

    ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ.

    ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಬೈಕ್ ಸವಾರ ಚಂದನ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಆತನ ಮೇಲೆ ಸಂಚರಿಸುತ್ತಿದ್ದ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

    ಚೇತನ್ ಕುಮಾರು ರವರು ಬೆಳಿಗ್ಗೆ ಬೈಕು ನೊಂದಣಿ ಸಂಖ್ಯೆ: KA-19-EJ-4072 ನೇಯದರಲ್ಲಿ ಲತೀಶ್ ಎಂಬುವರನ್ನು ಹಿಂಬದಿ ಸವಾರರನ್ನಾಗಿ ಕರೆದುಕೊಂಡು ಕುಲಶೇಖರ ಕಡೆಯಿಂದ ವಾಮಂಜೂರು ಕಡೆಗೆ ಹೋಗುತ್ತಿರುವಾಗ ಸಮಯ 9-43 ಗಂಟೆಗೆ ಸ್ರಾಕೇಡ್ ಹಾರ್ಟ್ ಶಾಲೆಯ ಎದುರು ತಲುಪುತ್ತಿದ್ದಂತೆ ವಾಮಂಜೂರು ಕಡೆಯಿಂದ ಕುಲಶೇಖರ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ನೊಂದಣಿ ಸಂಖ್ಯೆ: KA-20-AA-8844 ನೇಯದನ್ನು ಅದರ ಚಾಲಕ ಪ್ರಮೋದ್ ಎಸ್ ಎಂಬಾತನು ತನ್ನ ಬಲ ಬದಿಯಿಂದ ಓವರ್ ಟೇಕ್ ಮಾಡುವ ವಾಹನಗಳನ್ನು ಗಮನಿಸಿಯೂ ಕೂಡ ಬಸ್ಸನ್ನು ನಿಧಾನಗೊಳಿಸದೇ ನಿರ್ಲಕ್ಷ್ಯತನದಿಂದ ಚಲಾಯಿಸುತ್ತಾ ವೇಗವನ್ನು ಹೆಚ್ಚಿಸಿದ್ದು ಆ ಸಮಯ ಬಸ್ಸನ್ನು ಬಲ ಬದಿಯಿಂದ ಓವರ್ಟೇಕ್ ಮಾಡುತ್ತಿದ್ದ ಮೋಟಾರ್ ಸೈಕಲ್ ನೊಂದಣಿ ಸಂಖ್ಯೆ: KA-12-W-9611 ನೇಯದನ್ನು ಅದರ ಸವಾರ ಚಂದನ್ (20 ವರ್ಷ) ಎಂಬಾತನು ಬಸ್ಸನ್ನು ಓವರ್ಟೇಕ್ ಮಾಡುವ ಗಡಿಬಿಡಿಯಲ್ಲಿ ಬೈಕನ್ನು ನಿಯಂತ್ರಿಸದೇ ಅಜಾಗರೂಕತೆಯಿಂದ ಚಲಾಯಿಸಿ ಚೇತನ್ ಕುಮಾರು ರವರು ಚಲಾಯಿಸುತ್ತಿದ್ದ ಬೈಕಿನ ಬಲ ಬದಿಗೆ ಢಿಕ್ಕಿ ಪಡಿಸಿದ್ದು ಈ ಢಿಕ್ಕಿ ರಭಸಕ್ಕೆ ಢಿಕ್ಕಿ ಪಡಿಸಿದ ಬೈಕ್ ಸವಾರನು ಎಡಕ್ಕೆ ಬಿದ್ದಿದ್ದು ಅದೇ ವೇಳೆ ಬಸ್ಸಿನ ಬಲ ಹಿಂಭಾಗದ ಚಕ್ರವು ಬೈಕ್ ಸವಾರ ಚಂದನ್ ತಲೆಯ ಮೇಲೆ ಚಲಿಸಿ ಚಂದನ್ ರವರ ತಲೆಯು ಹೆಲ್ಮೆಟ್ ಸಹಿತ ಒಡೆದು ಮೆದಳು ಹೊರಚೆಲ್ಲಿ ಚಂದನ್ ರವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 140/2024 ಕಲಂ 281, 106(1) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 253

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.